5:01 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು

05/08/2023, 23:16

ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರಂಥಾಲಯ, ಗ್ರಾಮ ಆಡಳಿತಾಧಿಕಾರಿ ಕಛೇರಿ ಮುಂತಾದವು ಈ ರಸ್ತೆಗೆ ಹೊಂದಿಕೊಂಡಿವೆ. ಪ್ರತಿದಿನ ಹತ್ತಾರು ವಾಹನಗಳು,
ಶಾಲಾ ವಿದ್ಯಾರ್ಥಿಗಳು, ನಗರಕ್ಕೆ ಉದ್ಯೋಗ ಕ್ಕೆ, ಮತ್ತು ಅನ್ಯಕೆಲಸಗಳಿಗೆ, ಆಸ್ಪತ್ರೆಗೆ ತೆರಳುವ ಮಂದಿ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.


ಸುಮಾರು ಐದು ಕಿ.ಮೀ.ಇರುವ ಈ ರಸ್ತೆಯು ಮೂರು ಕಿ.ಮೀ.ಯಷ್ಟು ಹಂತ ಹಂತವಾಗಿ ಡಾಮರೀಕರಣಗೊಂಡಿದೆ. ಮುರುವ ರಿಂದ ಅರಳತ್ತಡ್ಕ ದ ಸುಮಾರು ಒಂದೂವರೆ ಕಿ.ಮೀ.ವರೇಗೆ 2019=20ರಲ್ಲಿ MPLAD ಅನುದಾನದ 8 ಲಕ್ಷದಲ್ಲಿ ಪುನಃ ತೇಪೆ ಹಚ್ಚುವ ಕೆಲಸ ಜರುಗಿತ್ತು. ಈಗ ಈ ಭಾಗದ ರಸ್ತೆಯು ಸಂಪೂರ್ಣ ಹೊಂಡ ಗುಂಡಿ ಬಿದ್ದು ನಾದುರಸ್ತಿಯಲ್ಲಿದೆ. ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲವಂತೂ ಅಸಹನೀಯವೆನಿಸಿದೆ. ಜನಪ್ರತಿನಿಧಿಗಳು ಇತ್ತು ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು