2:58 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಹತ್ತಿ ಬಟ್ಟೆ ಸೀರೆ ನೇಯ್ಗೆ: ಸಂಜೀವ ಶೆಟ್ಟಿಗಾರ್ ಅವರಿಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ; ಆಗಸ್ಟ್ 7ರಂದು ಪ್ರದಾನ

06/08/2023, 11:28

ಮಂಗಳೂರು(reporterkarnataka.com): ಪರಿಣಿತ ಉಡುಪಿ ಸೀರೆ ನೇಕಾರರು ಆಗಿರುವ ಸಂಜೀವ ಶೆಟ್ಟಿಗಾರ್ ರವರಿಗೆ ಹತ್ತಿ ಬಟ್ಟೆ ಸೀರೆ ನೇಯ್ಗೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಅವರು ತಾಳಿಪಾಡಿ ನೇಕಾರರ ಸಂಘದ ಸದಸ್ಯರು..
ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ದಿನದಂದು ಬೆಂಗಳೂರಿನಲ್ಲಿ ಅವರು ರಾಜ್ಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
74 ವಯಸ್ಸಿನ ಸಂಜೀವ ಶೆಟ್ಟಿಗಾರ್ ಈಗ ಇರುವ ಕೇವಲ ಹತ್ತು 80 ಕೌಂಟ್ ನೇಕಾರರಲ್ಲಿ ಒಬ್ಬರು. ಕೈಯಿಂದ ಚಂದದ ಬುಟ್ಟಾ ನೇಯುವಲ್ಲಿ ಪರಿಣಿತರು. 80 ಕೌಂಟ್ ನ ಸಹಜ ಸೀರೆ ನೇಯ್ದ ಮೊದಲಿಗರು. ಕದಿಕೆ ಟ್ರಸ್ಟ್ ಇಪ್ಪತ್ತು ವರುಷದ ನಂತರ ಗೋಪಿನಾಥ್ ಶೆಟ್ಟಿಗಾರ್ ಅವರ ನೆರವಿನಲ್ಲಿ ಪರಿಚಯಿಸಿದ ಇಕತ್ ಸೀರೆಯನ್ನು ಯಾವುದೇ ಹಿಂಜರಿಕೆ ತೋರಿಸದೆ ಮೊದಲು ನೇಯ್ದವರು. ನೇಕಾರಿಕೆ ಮತ್ತು ಅದರ ಪೂರ್ವ ತಯಾರಿಕೆಯ ಕೆಲಸದಲ್ಲಿ ಅತ್ಯಾಪೂರ್ವ ಪರಿಣತಿ ಹೊಂದಿರುವ ಸಂಜೀವ ಶೆಟ್ಟಿಗಾರ್, ಎರಡು ಹಾಸುಗಳನ್ನು ಒಂದೇ ಕೈಯಿಂದ ಜೋಡಿಸುವ ಅಪರೂಪದ ಕುಶಲತೆ ಹೊಂದಿದ್ದಾರೆ. ಇವರ ಸಂದು ಹಾಕುವ ಈ ಕೆಲಸ ನೋಡುವುದೇ ಕಣ್ಣಿಗೆ ಒಂದು ಹಬ್ಬ. ಸಾಂಪ್ರದಾಯಿಕ ಮತ್ತು ಆಧುನಿಕ ಎರಡೂ ಶೈಲಿಯ ಸೀರೆಗಳನ್ನು ಬಣ್ಣಗಳನ್ನು ಸರಿಯಾಗಿ ಹೊಂದಿಸಿ ಬೇಡಿಕೆಗೆ ಸರಿಯಾಗಿ ಈ 72ರ ವಯಸ್ಸಿನಲ್ಲೂ ನೇಯಬಲ್ಲ ಪ್ರಯೋಗಶೀಲ ಮನಸ್ಸು ಹೊಂದಿದ್ದಾರೆ. ಒಂದೇ ಹಾಸಿನಲ್ಲಿ ವಿವಿಧ ವಿನ್ಯಾಸದ ಸೀರೆ ನೆಯಬಲ್ಲರು. ಸದಾ ಹಸನ್ಮುಖರಾಗಿ ತಮ್ಮ ಕುಶಲತೆಯನ್ನು ಕಿರಿಯರಿಗೆ ಕಲಿಸುವ ಸಂಜೀವ ಶೆಟ್ಟಿಗಾರ್ ಎಲ್ಲರಿಗೂ ಅಚ್ಚುಮೆಚ್ಚು.
ಕದಿಕೆ ಟ್ರಸ್ಟ್ ಆರಂಭಿಸಿದ ಉಡುಪಿ ಸೀರೆ ಉಳಿಸಿ ಅಭಿಯಾನದ ನಂತರ ತಾಳಿಪಾಡಿ ನೇಕಾರರ ಸಂಘವನ್ನು ಸೇರಿದ ಶ್ರೀ ಸಂಜೀವ ಶೆಟ್ಟಿಗಾರ್ ಅನೇಕ ವರುಷಗಳ ಕಾಲ ಉಡುಪಿ ನೇಕಾರರ ಸಂಘದಲ್ಲಿ ಸೇವೆ ಸಲ್ಲಿಸಿದ್ದರು.
ಸಂಜೀವ ಶೆಟ್ಟಿಗಾರ್ ಅವರಿಗೆ ಅಭಿನಂದನೆಗಳು. ಅವರು ಇನ್ನೂ ಹಲವು ವರುಷಗಳ ಕಾಲ ಕಿರಿಯರನ್ನು ಪ್ರೋತ್ಸಾಹಿಸುತ್ತಾ ನೇಕಾರಿಕಾ ಕಾಯಕದಲ್ಲಿ ತೊಡಗಲಿ ಎನ್ನುವುದು ಕದಿಕೆ ಟ್ರಸ್ಟ್ ನ ಹಾರೈಕೆ.

ಇತ್ತೀಚಿನ ಸುದ್ದಿ

ಜಾಹೀರಾತು