9:46 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿದ್ಯಾ

06/08/2023, 11:41

ವಿಟ್ಲ(reporterkarnataka.com): ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ. ಕೆ. ಹೇಳಿದರು.
ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ನುಡಿದರು.
ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಹೇಳಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ ನೇಮಕಾತಿ, ತರಬೇತಿ ಬಗ್ಗೆ ಹಾಗೂ ಸಮಾಜ ವಿರೋಧೀ ಕೃತ್ಯಗಳನ್ನು ತಡೆಯಲು ಇರುವ ವಿವಿಧ ಕಾನೂನುಗಳ ಬಗ್ಗೆಯೂ ಸವಿವರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್. ಡಿ. ಎಂ .ಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ, ಹಿರಿಯರಾದ ಮುರುವ ನಡುಮನೆ ಮಹಾಬಲ ಭಟ್ ಹಾಗೂ ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉಮಾನಾಥ ರೈ ಮೇರಾವು , ಹಿರಿಯ ಶಿಕ್ಷಕಿ ಲತಾ ಯು ಉಪಸ್ಥಿತರಿದ್ದರು.
ಪೋಷಕ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು