8:10 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ; ಅಂಕೋಲಾ ಬಳಿ 50ಕ್ಕೂ ಹೆಚ್ಚು ಮನೆಗಳು ಜಲಾವೃತ, ಹಳಿ ತಪ್ಪಿದ ಮಂಗಳೂರು-ಮುಂಬೈ ರೈಲು

23/07/2021, 19:38

ಬೆಳಗಾವಿ/ಅಂಕೋಲಾ/ಹಾಸನ ಮಂಗಳೂರು(reporterkarnataka news) : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 5 ಜಿಲ್ಲೆ ಹಾಗೂ ಕರಾವಳಿಯ ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಶಿರಾಡಿ ಘಾಟಿ ಕುಸಿತದ ಬೆನ್ನಲ್ಲೇ ಚಾರ್ಮಾಡಿಯಲ್ಲಿ ಘಾಟಿ ಕುಸಿತ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಗ್ರಾಮವೊಂದರಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಮಂಗಳೂರು- ಮುಂಬೈ ರೈಲು ಹಳಿ ತಪ್ಪಿದೆ.

ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು- ಮುಂಬಯಿ ರೈಲು ದೂದ್ ಸಾಗರ್ ಬಳಿ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಅಪಾಯ ಉಂಟಾಗಿಲ್ಲ. ಎಲ್ಲರನ್ನು ಬಸ್ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉತ್ತರ ಕನ್ನಡದ ಅಂಕೋಲಾ ಸಮೀಪದ ಹಿಚ್ಕಡ ಗ್ರಾಮದಲ್ಲಿ ಕನಿಷ್ಠ 50 ಮನೆಗಳು ಜಲಾವೃತವಾಗಿದೆ. ಹಲವು ಮನೆಗಳು ಸಂಪೂರ್ಣ ನಾಶವಾಗಿವೆ. ಸ್ಥಳೀಯರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು