7:04 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕ್ರಾಂತಿಕಾರಿ ಕವಿ ಗದ್ದರ್ ಇನ್ನಿಲ್ಲ: ಅನಾರೋಗ್ಯದಿಂದ ಹೈದರಾಬಾದ್ ಅಸ್ಪತ್ರೆಯಲ್ಲಿ ಸಾವು

06/08/2023, 22:19

ಹೈದರಾಬಾದ್(reporterkarnataka.com): ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಎಂದೇ ಖ್ಯಾತರಾಗಿದ್ದ ಗುಮ್ಮಡಿ ವಿಠಲ ರಾವ್(77) ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗದ್ದರ್ ಅವರಿಗೆ ಇತ್ತೀಚೆಗೆ ಬೈಪಾಸ್ ಸರ್ಜರಿ ನಡೆದಿತ್ತು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಗದ್ದರ್ ಅವರು ತನ್ನ ಕ್ರಾಂತಿಕಾರಿ ಹಾಡುಗಳಿಂದ ಖ್ಯಾತಿ ಪಡೆದಿದ್ದರು. ಗದ್ದರ್ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರುತ್ತಿದ್ದರು. ಗದ್ದರ್ ಅವರು ಶೋಷಣೆ, ಅನ್ಯಾಯದ ವಿರುದ್ಧ ಸದಾ ಹೋರಾಡುತ್ತಿದ್ದರು. ಮಂಗಳೂರು ಸೇರಿದಂತೆ ಕರ್ನಾಟಕ ಹಲವೆಡೆ ಪ್ರತಿಭಟನೆಯಲ್ಲೂ ಭಾಗವಹಿಸಿದ್ದರು. ನಕ್ಸಲ್ ಆರೋಪದ ಮೇಲೆ ಸಾಕೇತ್ ರಾಜನ್ ಹತ್ಯೆ ನಡೆದಾಗ ರಾಜ್ಯದಲ್ಲಿ ಅವರು ಪ್ರತಿಭಟನೆ ನಡೆದಿದ್ದರು. ನಕ್ಸಲ್ ಪರ ಎಂಬ ಆರೋಪ ಅವರ ಮೇಲಿತ್ತು. ಗದ್ದರ್ ಅವರ ಅಂತಿಮ ದರ್ಶನ ಪಡೆಯಲು ಹೈದರಾಬಾದ್ ನ ಭೂದೇವಿ ನಗರದ ಅವರ ನಿವಾಸದ ಮುಂದೆ ಭಾರೀ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ನೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು