1:37 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕ್ರಾಂತಿಕಾರಿ ಕವಿ ಗದ್ದರ್ ಇನ್ನಿಲ್ಲ: ಅನಾರೋಗ್ಯದಿಂದ ಹೈದರಾಬಾದ್ ಅಸ್ಪತ್ರೆಯಲ್ಲಿ ಸಾವು

06/08/2023, 22:19

ಹೈದರಾಬಾದ್(reporterkarnataka.com): ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಎಂದೇ ಖ್ಯಾತರಾಗಿದ್ದ ಗುಮ್ಮಡಿ ವಿಠಲ ರಾವ್(77) ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗದ್ದರ್ ಅವರಿಗೆ ಇತ್ತೀಚೆಗೆ ಬೈಪಾಸ್ ಸರ್ಜರಿ ನಡೆದಿತ್ತು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಗದ್ದರ್ ಅವರು ತನ್ನ ಕ್ರಾಂತಿಕಾರಿ ಹಾಡುಗಳಿಂದ ಖ್ಯಾತಿ ಪಡೆದಿದ್ದರು. ಗದ್ದರ್ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರುತ್ತಿದ್ದರು. ಗದ್ದರ್ ಅವರು ಶೋಷಣೆ, ಅನ್ಯಾಯದ ವಿರುದ್ಧ ಸದಾ ಹೋರಾಡುತ್ತಿದ್ದರು. ಮಂಗಳೂರು ಸೇರಿದಂತೆ ಕರ್ನಾಟಕ ಹಲವೆಡೆ ಪ್ರತಿಭಟನೆಯಲ್ಲೂ ಭಾಗವಹಿಸಿದ್ದರು. ನಕ್ಸಲ್ ಆರೋಪದ ಮೇಲೆ ಸಾಕೇತ್ ರಾಜನ್ ಹತ್ಯೆ ನಡೆದಾಗ ರಾಜ್ಯದಲ್ಲಿ ಅವರು ಪ್ರತಿಭಟನೆ ನಡೆದಿದ್ದರು. ನಕ್ಸಲ್ ಪರ ಎಂಬ ಆರೋಪ ಅವರ ಮೇಲಿತ್ತು. ಗದ್ದರ್ ಅವರ ಅಂತಿಮ ದರ್ಶನ ಪಡೆಯಲು ಹೈದರಾಬಾದ್ ನ ಭೂದೇವಿ ನಗರದ ಅವರ ನಿವಾಸದ ಮುಂದೆ ಭಾರೀ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ನೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು