2:59 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರಿನ ಬಿಲ್ಡರ್ ಆತ್ಮಹತ್ಯೆ: ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಹಾರಿ ಸಾವಿಗೆ ಶರಣು

06/08/2023, 22:33

ಮಂಗಳೂರು(reporterkarnataka.com): ನಗರದ ಬಿಲ್ಡರ್ ವೊಬ್ಬರು ಬೆಂದೂರ್ ವೆಲ್ ನ ತನ್ನ ಅಪಾರ್ಟ್ ಮೆಂಟಿನ ಮಹಡಿಯಿಂದ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೆ ಶರಣಾದ ಉದ್ಯಮಿ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ವಿಜಯವಾಹಿನಿ ಕನ್ ಸ್ಟ್ರಕ್ಷನ್ ಹೆಸರಿನಲ್ಲಿ ಟಿಪ್ಪರ್, ಕ್ವಾರಿ, ಜಲ್ಲಿ ಬ್ಯುಸಿನೆಸ್ ನಡೆಸುತ್ತಿದ್ದ ಅವರು
ನಗರದ ಬೆಂದೂರು ವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟೆಂಟಿಗೆ ಬಂದು 17ನೇ ಮಹಡಿಯಿಂದ ಜಿಗಿದಿದ್ದಾರೆ. ತಲೆಯ ಭಾಗ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಕದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು