11:50 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಸಾವಿನಲ್ಲೂ ಸಾರ್ಥಕತೆ ಕಂಡ ಸಹನಾ: 5 ಅಂಗಾಂಗಳ ದಾನ; ರವಾನೆಗೆ ಕಾಫಿನಾಡ ಜಿಲ್ಲಾಸ್ಪತ್ರೆಗೆ ಸಜ್ಜು

07/08/2023, 16:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆಯನ್ನು ಕಂಡಿದ್ದು, ಮೃತರ ಅಂಗಾಂಗ ರವಾನೆಗೆ ಕಾಫಿನಾಡು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ಸಿದ್ದವಾಗಿದೆ.
ಕಾಂಗ್ರೆಸ್ ಮಾಧ್ಯಮ ವಕ್ತಾರ ಹಾಗೂ ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಅವರು ಸಾವಿನಲ್ಲೂ ಬೇರೆಯವರ ಬದುಕಿಗೆ ನೆರವಾಗಿದ್ದಾರೆ. ಸಹನಾ ಅವರು ಬ್ರೈನ್ ಟ್ಯೂಮರ್ ನಿಂದ ಸಾವನ್ನಪ್ಪಿದ್ದಾರೆ. ಸಹನಾ ಅವರ ಅಂಗಾಂಗಗಳನ್ನು ಬೆಂಗಳೂರು ಹಾಗೂ ಮಂಗಳೂರಿಗೆ ರವಾನೆಯಾಗಲಿದೆ. ಕಣ್ಣು, ಕಿಡ್ನಿ ಹಾಗೂ ಲಿವರ್ ಸೇರಿ ಒಟ್ಟು 5 ಅಂಗಗಳ ದಾನ ಮಾಡಲಾಗಿದೆ.


2ನೇ ಬಾರಿ ಅಂಗಾಂಗ ರವಾನೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ಒಂಬತ್ತು ತಿಂಗಳ ಹಿಂದೆ ಯುವತಿ ರಕ್ಷಿತಾಬಾಯಿ ಅಂಗಾಂಗಗಳನ್ನ ರವಾನೆ ಮಾಡಲಾಗಿತ್ತು.
ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ರವಾನೆ ಮಾಡಿದ ಮೊದಲ ಜಿಲ್ಲೆ ಕಾಫಿನಾಡು ಎಂಬ ಹೆಗ್ಗಳಿಕೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು