9:50 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

08/08/2023, 19:38

ಮಂಗಳೂರು(reporterkarnataka.com): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಅವರು ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸಂಸ್ಥೆಯೆಲ್ಲ ವಿದ್ಯಾರ್ಥಿಗಳು ಮುಂದೆ ತಮ್ಮ ತಮ್ಮ ವಿಭಾಗದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಹೆಸರನ್ನು ತರಬೇಕೆಂದು ಕಿವಿಮಾತನ್ನು ಹೇಳಿದರು. ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫಾಝ್ ಹಾಸಿಮ್ ಜೆ. ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಅವರು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು.

ಈ ಕಾರ್ಯಕ್ರಮದಲ್ಲಿ ಫೀನಾ ಹಕೀಮ್ ಮತ್ತು ಕುಮಾರಿ ಹರ್ಷಿತ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ 3ನ್ನು ಬಿಡುಗಡೆಗೊಳಿಸಲಾಯಿತು.
ಪಿ.ಎ. ವಿದ್ಯಾಸಂಸ್ಥೆಯ ಎ.ಜಿ.ಎಂ. ಸರ್ಫುದ್ದೀನ್ ರವರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ವಂದಿಸಿದರು. ಎಂಬಿಎ ವಿಭಾಗದ ನಿರ್ದೇಶಕ ಹಾಗೂ ಡೀನ್, (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್, ಪಿ.ಎ. ಟ್ರಸ್ಟ್ ನ ವಿವಿಧ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ, ಡಾ. ಸರ್ಫಾಝ್ ಹಾಸಿಮ್ ಜೆ, ಪ್ರೊ. ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ. ಸಜೀಸ್ ರಘುನಾಥನ್ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಕಾಲೇಜಿನ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾದ ಡಾ. ರೊನಾಲ್ಡ್ ವಾಲ್ಡರ್ ಹಾಗೂ ದೈಹಿಕ ಶಿಕ್ಷಣ ನಿರ್ಧೇಶಕರಾದ ಡಾ. ಇಕ್ಬಾಲ್ ಅವರು ಕಾರ್ಯಕ್ರಮವನ್ನು ಆಯೋಜಿಸಿದರು. ಬುಶೈರಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು