10:03 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ: ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ ಖಂಡ್ರೆ ಭೇಟಿ

09/08/2023, 14:29

ಬೆಂಗಳೂರು(reporterkarnataka.com): ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋ ಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆಯೇ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.
ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ನುಡಿದರು.
ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊದ್ದ 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು