10:19 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸ್ಪಂದನಾ ಪಂಚಭೂತಗಳಲ್ಲಿ ಲೀನ: ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ; ಕಣ್ಣೀರ ವಿದಾಯ

09/08/2023, 17:12

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಥಾಯ್ಲೆಂಡ್‌ನಲ್ಲಿಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಬುಧವಾರ ಹರಿಶ್ಚಂದ್ರ ಘಾಟ್‌ ನಲ್ಲಿ ಸಕಲ ವಿಧಿ ವಿಧಾನಗಳೊಂದಿಗೆ ನಡೆಯಿತು.
ಮಲ್ಲೇಶ್ವರಂ ನಲ್ಲಿರುವ ಸ್ಪಂದನಾ ಅವರ ತವರು ಮನೆಯಿಂದ ಪಾರ್ಥಿವ ಶರೀರವನ್ನು ಆ್ಯಂಬ್ಯುಲೆನ್ಸ್ ನಲ್ಲಿ ಇರಿಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಸಂಬಂಧಿಕರು ಮನೆಯಿಂದ ಅಂತಿಮ ಗೌರವ ಸಲ್ಲಿಸಿದರು. ನಂತರ ವಾಹನಗಳ ಮೆರವಣಿಗೆ ಮೂಲಕ ಹರಿಶ್ಚಂದ್ರ ಘಾಟ್ ಗೆ ಪಾರ್ಥಿವ ಶರೀರವನ್ನು ತರಲಾಯಿತು. ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಪುತ್ರ ಶೌರ್ಯ ಹಾಗೂ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದರು. ಸ್ಪಂದನಾ ಅವರ ಸಂಬಂಧಿಕರ ಹಾಗೂ ಅಭಿಮಾನಿಗಳ ಆಕ್ರಂಧನ ಮುಗಿಲು ಮುಟ್ಟಿತ್ತು.


ಸ್ಪಂದನಾ ಅವರು ಥಾಯ್ಲೆಂಡ್ ಪ್ರವಾಸದಲ್ಲಿರುವಾಗ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತವರು ಮನೆಗೆ ತರಲಾಯಿತು.
ಸ್ಪಂದನಾ ತವರು ಮನೆಯಾದ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಮ್ ಅವರ ನಿವಾಸದಲ್ಲೇ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಮಾಜಿ ಸಚಿವರಾದ ಉಮಾಶ್ರೀ, ಕುಮಾರ್ ಬಂಗಾರಪ್ಪ, ಚಿತ್ರನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪ್ರಿಯಾಂಕಾ ಉಪೇಂದ್ರ, ದೊಡ್ಡಣ್ಣ, ರಂಗಾಯಾಣ ರಘು, ಸೇರಿದಂತೆ ರಾಜಕೀಯ ರಂಗದ ಗಣ್ಯರು, ಚಿತ್ರರಂಗದ ಗಣ್ಯರು ಹಾಗೂ ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು