10:52 AM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು