7:14 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು