6:13 AM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಅರಗ ಜ್ಞಾನೇಂದ್ರ ಶಾಸಕ ಸ್ಥಾನ ಅನರ್ಹಗೊಳಿಸಿ ತಕ್ಷಣ ಬಂಧಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ

10/08/2023, 12:54

ಬೆಂಗಳೂರು(reporterkarnataka.com): ವರ್ಣಬೇಧ, ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಬೇಧ ಮಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ
ಮನವಿ ಸಲ್ಲಿಸಿದೆ.
ಆಗಸ್ಟ್ 1ರಂದು ತೀರ್ಥಹಳ್ಳಿ ಶಾಸಕರೂ ಆಗಿರುವ ಆರಗ ಜಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ರಾಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಣರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ವರ್ಣಭೇದ, ಜನಾಂಗೀಯ ನಿಂದನೆ ಮತ್ತು ಪ್ರಾಂತ್ಯವಾರು ಭೇದವನ್ನುಂಟು ಮಾಡುವ ಹೇಳಿಕೆ ನೀಡಿದ್ದಾರೆ. ಈ ಕುರಿತ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 2ರಂದು ದೂರು ದಾಖಲು ಮಾಡಲಾಗಿದೆ. ಆದರೆ ಅರಗ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವೀರಶೈವ ಲಿಂಗಾಯತ ಭವನದಲ್ಲಿ ನಡೆದ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು
ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ತಿಳಿಸಿದ್ದಾರೆ.

.

ಇತ್ತೀಚಿನ ಸುದ್ದಿ

ಜಾಹೀರಾತು