8:46 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಅರಗ ಜ್ಞಾನೇಂದ್ರ ಶಾಸಕ ಸ್ಥಾನ ಅನರ್ಹಗೊಳಿಸಿ ತಕ್ಷಣ ಬಂಧಿಸಿ: ಸ್ಪೀಕರ್ ಗೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ

10/08/2023, 12:54

ಬೆಂಗಳೂರು(reporterkarnataka.com): ವರ್ಣಬೇಧ, ಜನಾಂಗೀಯ ನಿಂದನೆ ಹಾಗೂ ಪ್ರಾಂತ್ಯವಾರು ಬೇಧ ಮಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸುವಂತೆ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ
ಮನವಿ ಸಲ್ಲಿಸಿದೆ.
ಆಗಸ್ಟ್ 1ರಂದು ತೀರ್ಥಹಳ್ಳಿ ಶಾಸಕರೂ ಆಗಿರುವ ಆರಗ ಜಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ರಾಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಣರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ವಿರುದ್ಧ ವರ್ಣಭೇದ, ಜನಾಂಗೀಯ ನಿಂದನೆ ಮತ್ತು ಪ್ರಾಂತ್ಯವಾರು ಭೇದವನ್ನುಂಟು ಮಾಡುವ ಹೇಳಿಕೆ ನೀಡಿದ್ದಾರೆ. ಈ ಕುರಿತ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 2ರಂದು ದೂರು ದಾಖಲು ಮಾಡಲಾಗಿದೆ. ಆದರೆ ಅರಗ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ವೀರಶೈವ ಲಿಂಗಾಯತ ಭವನದಲ್ಲಿ ನಡೆದ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು
ಎಂದು ಮಹಾಸಭಾದ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ತಿಳಿಸಿದ್ದಾರೆ.

.

ಇತ್ತೀಚಿನ ಸುದ್ದಿ

ಜಾಹೀರಾತು