8:12 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ರಾಷ್ಟ್ರೀಯ ಭಾವೈಕ್ಯತೆ ಸಾಧ್ಯ: ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್

10/08/2023, 20:26

ಮಂಗಳೂರು(reporterkarnataka.com):ನಗರದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು.

ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯು ಪ್ರೇರಣೆ ನೀಡಲಿದೆ ಎಂದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಜೀವನವನ್ನು ರೂಪಿಸಬೇಕೆಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಪಪೂ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್‌ ಅವರು ಎನ್.ಎಸ್.ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವನೆ ಹೆಚ್ಚಿಸುವಲ್ಲಿ ರಾ. ಸೇ. ಯೋಜನೆ ಪೂರಕವಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿ, ಸಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮಿಲಾಗ್ರಿಸ್ ವಿದ್ಯಾಸಂಸ್ಥೆಯ ರಾ. ಸೇ. ಸೇವಾ ಯೋಜನೆ ಘಟಕವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬೇಕೆಂದರು.
ರಾ.ಸೇ.ಯೋಜನಾಧಿಕಾರಿ ಕಿರಣ್ ಡಿಸೋಜ, ರಾ. ಸೇ. ಯೋಜನೆಯ ವಿದ್ಯಾರ್ಥಿ ನಾಯಕ ಅಹ್ಮದ್ ಶಾಕಿಬ್ ಖಾನ್, ಉಪನಾಯಕ ಶಮನ್ ಮತ್ತು ಕರ‍್ಯದರ್ಶಿ ಝುಲ್ಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಕಿರಣ್ ಡಿಸೋಜ ಸ್ವಾಗತಿಸಿದರು. ಅಹ್ಮದ್ ಶಾಕಿಬ್ ಖಾನ್ ವಂದಿಸಿ, ಮುಷ್ಫಿಕ್ ಅಹ್ಮದ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು