6:11 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪುತ್ತೂರು: ಗೃಹಜ್ಯೋತಿ ಯೋಜನೆಗೆ ನಾಳೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

10/08/2023, 20:30

ಪುತ್ತೂರು(reporterkarnataka.com): ಉಚಿತ ಬೆಳಕು, ಸುಸ್ಥಿರ ಬದುಕಿಗಾಗಿ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ.
ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಇಂಧನ ಸಚಿವ ಕೆ.ಜೆ. ಚಾರ್ಜ್ ಗೌರವ ಉಪಸ್ಥಿತಿ ವಹಿಸುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು