2:14 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ

11/08/2023, 13:07

ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ
ಟೈ ಆಗುವ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ನಂತರ ಅದೃಷ್ಟ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.
ಪಾವೂರು ಗ್ರಾಮ ಪಂಚಾಯಿತಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇದರಲ್ಲಿ ಎಸ್ ಡಿಪಿಐ 6, ಕಾಂಗ್ರೆಸ್ 5, ಬಿಜೆಪಿ 2 ಮತ್ತು 2 ಸ್ಥಾನವನ್ನು ಪಕ್ಷೇತರರು ಹೊಂದಿದ್ದಾರೆ.
ಕಳೆದ ಬಾರಿ ಪಕ್ಷೇತರರ ಬೆಂಬಲದೊಂದಿಗೆ ಎಸ್ ಡಿಪಿಐ ಅಧಿಕಾರ ನಡೆಸಿತ್ತು.
ಈ ಬಾರಿ ಎಸ್ ಡಿಪಿಐ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿ ವಲೇರಿಯನ್ ಡಿಸೋಜ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೆಹರುನ್ನಿಸಾ, ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರವಿಕಲಾ ಸ್ಪರ್ಧಿಸಿದ್ದರು. ಚುನಾವಣೆ ನಡೆದಾಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಏಳು ಮತಗಳನ್ನು ಪಡೆದಿದ್ದು ಒಂದು ಮತ ಅಸಿಂಧುಗೊಂಡಿತು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳೂ 7 ಮತಗಳನ್ನು ಪಡೆದಿದ್ದರು. ಒಬ್ಬರು ಮತ ಚಲಾಯಿಸದ ಕಾರಣ ಸಮ ಬಲಗೊಂಡಿದ್ದು ಇದರಿಂದಾಗಿ ಅದೃಷ್ಟ ಚೀಟಿ ಎತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು