11:10 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ

11/08/2023, 13:07

ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ
ಟೈ ಆಗುವ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ನಂತರ ಅದೃಷ್ಟ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.
ಪಾವೂರು ಗ್ರಾಮ ಪಂಚಾಯಿತಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇದರಲ್ಲಿ ಎಸ್ ಡಿಪಿಐ 6, ಕಾಂಗ್ರೆಸ್ 5, ಬಿಜೆಪಿ 2 ಮತ್ತು 2 ಸ್ಥಾನವನ್ನು ಪಕ್ಷೇತರರು ಹೊಂದಿದ್ದಾರೆ.
ಕಳೆದ ಬಾರಿ ಪಕ್ಷೇತರರ ಬೆಂಬಲದೊಂದಿಗೆ ಎಸ್ ಡಿಪಿಐ ಅಧಿಕಾರ ನಡೆಸಿತ್ತು.
ಈ ಬಾರಿ ಎಸ್ ಡಿಪಿಐ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿ ವಲೇರಿಯನ್ ಡಿಸೋಜ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೆಹರುನ್ನಿಸಾ, ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರವಿಕಲಾ ಸ್ಪರ್ಧಿಸಿದ್ದರು. ಚುನಾವಣೆ ನಡೆದಾಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಏಳು ಮತಗಳನ್ನು ಪಡೆದಿದ್ದು ಒಂದು ಮತ ಅಸಿಂಧುಗೊಂಡಿತು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳೂ 7 ಮತಗಳನ್ನು ಪಡೆದಿದ್ದರು. ಒಬ್ಬರು ಮತ ಚಲಾಯಿಸದ ಕಾರಣ ಸಮ ಬಲಗೊಂಡಿದ್ದು ಇದರಿಂದಾಗಿ ಅದೃಷ್ಟ ಚೀಟಿ ಎತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು