4:08 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಾದ್ ಸೈಮಾಚೊ: ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗ

11/08/2023, 21:31

ಮಂಗಳೂರು(reporterkarnataka.com): ಕವಿತಾ ಟ್ರಸ್ಟ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ `ಸಾದ್ ಸೈಮಾಚೊ’ (ಪ್ರಕೃತಿಯ ನಾದಗಳು) ಎಂಬ ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗವನ್ನು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಸಹಕಾರದಲ್ಲಿ ಆಗಸ್ಟ್ 6ರಂದು ನಡೆಸಿತು. ಗೋವಾದ ಢಾಯಿ ಆಖಾರ್ (ಎರಡುವರೆ ಅಕ್ಷರ) ತಂಡವು ಪ್ರಕೃತಿಯ ದನಿಗಳಿಗೆ ಸಂಬಂಧಪಟ್ಟ ಹಿಂದಿ ಮತ್ತು ಕೊಂಕಣಿಯ ಸಾಹಿತ್ಯವನ್ನು ಸಾದರಪಡಿಸಿದರು.

ಕೇದಾರ್‌ನಾಥ್ ಸಿಂಗ್ ಇವರ ’ಬಾಘ್’, ಸಲೀಲ್ ಚತುರ್ವೇದಿಯ ’ಕಹಾಂ ಗಯೀ ಓ ನದೀ ಕೀ ಧಾರ್’ ಮತ್ತು ಜಾರ್ಕಂಡಿನ ಜಾಸಿಂತಾ ಕೆರ್ಕಟ್ಟಾ ಇವರ ’ನದೀ, ಪಹಾಡ್ ಔರ್ ಬಜಾರ್’ – ಹಿಂದಿ ಕವಿತೆಗಳನ್ನು ಹಾಗೂ ಮಮತಾ ವೆರ್ಲೇಕರ್ ಇವರ ’ಗುಪೀತ್’, ’ಫೊಂಡ್ಕುಲಾಂ’ ಮತ್ತು ಪ್ರಕಾಶ್ ಪರಿಯೆಂಕಾರ್ ಇವರ ’ಪಾಣಿ ಆತಾಂ ದೆಂವ್ತಾ’ ಹಾಗೂ ’ಹಿ ರಾನ್‌ಕಾಣಿ’ ಕವಿತೆಗಳನ್ನು ಪ್ರಸ್ತುತಪಡಿಸಿದರು.
ಜ್ಞಾನಪೀಠ ಪುರಸ್ಕಾರ ವಿಜೇತ ಸಾಹಿತಿ ದಾಮೋದರ ಮಾವ್ಜೊ ಇವರ ಕತೆ ’ಭುರ್ಗಿಂ ಮುಗೆಲಿಂ ತಿಂ’ ವಿಷಯ ಮತ್ತು ಪ್ರಸ್ತುತಿಯ ಕಾರಣಕ್ಕಾಗಿ ನೆರೆದ ಕೇಳುಗರ ಕಣ್ಣಲ್ಲಿ ನೀರೂರಿಸಿತು. ಡಾ. ರಮಿತಾ ಗುರವ್, ಡಾ. ಮನೀಷಾ ಖೊರಾಟೆ ಮತ್ತು ಮಮತಾ ವೆರ್ಲೆಕಾರ್ ಸುಂದರವಾಗಿ ಇವನ್ನು ವಾಚಿಸಿದರು. ಆರ್ತಿ ದಾಸ್ ಮತ್ತು ನಿಯತಿ ಪತ್ರೆ ಸಾಹಿತ್ಯ ಮತ್ತು ಸಾಹಿತಿಗಳ ಹಿನ್ನಲೆ ವಿವರಿಸಿದರು.
ಪ್ರತಿಷ್ಟಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರು ಬಾಳಿಗಾ ಢಾಯಿ ಆಖಾರ್ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕವಿತಾ ಟ್ರಸ್ಟ್ ಟ್ರಸ್ಟಿಗಳಾದ ವಿಲಿಯಮ್ ಪಾಯ್ಸ್ ಸ್ವಾಗತಿಸಿ, ವಿಕ್ಟರ್ ಮತಾಯಸ್ ವಂದಿಸಿದರು.
ನಂತರ ಸಾಹಿತ್ಯ ಅಕಾಡೆಮಿ ನವದೆಹಲಿ, ಕವಿತಾ ಟ್ರಸ್ಟ್ ಸಹಕಾರದಲ್ಲಿ ಆಯೋಜಿಸಿದ `ಲೋಕ: ವಿವಿಧ ಸ್ವರಗಳು’ ಎಂಬ ಜಾನಪದ ಕಾರ್ಯಕ್ರಮ ನಡೆಯಿತು. ನವ ಸಿದ್ದಿ ಕಲಾ ತಂಡ ಮೈನಳ್ಳಿ ಇವರಿಂದ ಡಮಾಮ್, ಫುಗ್ಡಿ, ಜಾಕಯ್ ಮತ್ತು ಶಿಗ್ಮೊ ಆಟಗಳ ಪ್ರಸ್ತುತಿ ನಡೆಯಿತು. ಕಲಾವಿದ ಸುನೀಲ್ ಸಿದ್ದಿ ಈ ಪ್ರಕಾರಗಳ ವಿವರಣೆ ನೀಡಿದರು. ಅಕಾಡೆಮಿಯ ಕೊಂಕಣಿ ಸಲಹಾ ಸಮಿತಿಯ ಅಧ್ಯಕ್ಷ ಮೆಲ್ವಿನ್ ರೊಡ್ರಿಗಸ್ ಕಲಾವಿದರನ್ನು ಗೌರವಿಸಿದರು. ಸದಸ್ಯಾ ಎಚ್ಚೆಮ್ ಪೆರ್ನಾಳ್ ಸ್ವಾಗತಿಸಿದರು. ಇನ್ನೋರ್ವ ಸದಸ್ಯ ಸ್ಟ್ಯಾನಿ ಬೇಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು