10:14 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಹೊರನಾಡಿಗೆ ಬಾರದ ಸರಕಾರಿ ಬಸ್!: ಕಾದು ಕಾದು ಸುಸ್ತಾಗಿ ರಾತ್ರಿ ವೇಳೆ ಪಿಕ್ ಅಪ್ ವಾಹನವೇರಿದ ಮಹಿಳೆಯರು ಸೇರಿದಂತೆ ಭಕ್ತರು!!

12/08/2023, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸರ್ಕಾರಿ ಬಸ್ ಇಲ್ಲದೆ ಮಹಿಳೆಯರು ಮಕ್ಕಳು ಸೇರಿದಂತೆ ಪ್ರಯಾಣಿಕರು ಪಿಕ್ ಅಪ್ ವಾಹನದಲ್ಲಿ ಯಾನ ಮಾಡಿದ ಘಟನೆ ಕಾಫಿನಾಡಲ್ಲಿ ನಡೆದಿದೆ.
ಕಳಸ ಸಮೀಪದ ಹೊರನಾಡಿನಲ್ಲಿ ಬಸ್ಸಿಗಾಗಿ ಭಕ್ತರು, ಪ್ರವಾಸಿಗರು ಕಾದು ಕುಳಿತ್ತಿದ್ದರು.


ಶುಕ್ರವಾರ ಸಂಜೆಯಿಂದ ರಾತ್ರಿವರೆಗೂ ಬಸ್ಸಿಗಾಗಿ ಕಾದ ಪ್ರವಾಸಿಗರು ಸುಸ್ತಾಗಿದ್ದರು. ನಂತರ ಬಸ್ ಇಲ್ಲದೆ ರಾತ್ರಿ ಪಿಕಪ್ ವಾಹನದಲ್ಲಿ ಮೂಡಿಗೆರೆಗೆ ಪ್ರಯಾಣ ಮಾಡಬೇಕಾಯಿತು.
ಪಿಕಪ್ ವಾಹನ ಹತ್ತಿದವರಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಇದ್ದರು. ಶಕ್ತಿ ಯೋಜನೆ ಬಳಿಕ ಬಸ್ ಗಳ ಸಂಖ್ಯೆ ಇಳಿಮುಖವಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಕಡೂರು ಕಡೆಗೆ ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ದುಬಾರಿ ಹಣ ನೀಡಿ ಪಿಕ್ ಅಪ್ ವಾಹನದಲ್ಲಿ ಸಂಚಾರ ಮಾಡಬೇಕಾಯಿತು. ಹೊರ ಜಿಲ್ಲೆಗಳಿಂದ ಬಂದ ಪ್ರವಾಸಿಗರು ಬಸ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು