9:51 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು