3:05 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ

12/08/2023, 23:06

ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ್ನಾಂಡಿಸ್, ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ಹಾಗೂ ಹಳೆ ವಿದ್ಯಾರ್ಥಿನಿ ತೇಜಸ್ವಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳು, ಪ್ರಾಂಶುಪಾಲರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಪ್ರೊ. ಎಚ್. ಎಸ್. ಫೆರ್ನಾಂಡಿಸ್ ಮಾತನಾಡಿ ವಿದ್ಯಾರ್ಥಿಗಳು, ಹೆತ್ತವರು, ಆಡಳಿತ ಮಂಡಳಿ ಪರಸ್ಪರ ಅರಿತು ಹೊಂದಾಣಿಕೆಯಿಂದ ಶ್ರಮಿಸಿದರೆ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ಶಿಸ್ತು ಬಹಳ ಮುಖ್ಯ ಎಂಬ ಸಂದೇಶವನ್ನು ನೀಡಿದರು. ಹಳೆ ವಿದ್ಯಾರ್ಥಿನಿ ತೇಜಸ್ವಿ ತಮ್ಮ 3 ವರ್ಷಗಳ ವಿದ್ಯಾರ್ಥಿ ಜೀವನದ ನೆನಪನ್ನು ಮೆಲುಕು ಹಾಕುತ್ತಾ, ನಾವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಅದೇ ರೀತಿ ಪ್ರಾಂಶುಪಾಲರು ವಂ|ಭ| ಲತಾ ಫೆರ್ನಾಂಡಿಸ್ ಎ. ಸಿ. ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ನಿಹಾರಿಕಾ ಶೆಟ್ಟಿ, ವಾಣಿಜ್ಯ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಿಸಿದರು. ವಿಜೇತಾ, ವಾಣಿಜ್ಯ ಉಪನ್ಯಾಸಕರು ಸ್ವಾಗತಿಸಿದರು, ಕುಮಾರಿ ಅಲ್ವಿಶಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು