9:15 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು

13/08/2023, 10:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್
ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಹಶೀಲ್ದಾರರ್ ಉಮೇಶ್ ವಿರುದ್ದ ಕಡೂರು ಪೊಲೀಸರಿಗೆ
ದೂರು ನೀಡಿದ್ದಾರೆ.
ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟಿದ್ದ ಆರೋಪ
ತಹಶೀಲ್ದಾರ್ ಉಮೇಶ್ ಮೇಲಿದೆ. ಕಡೂರು ತಾಲೂಕಿನ ಉಳಿಗನಾರು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಡಲಾಗಿದೆ. ಗ್ರಾಮದ ಹನುಮಯ್ಯ, ರತ್ನಮ್ಮ, ನಾರಾಯಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪ ತಹಶೀಲ್ದಾರ್ ಅವರ ಮೇಲಿದೆ. ಸರ್ಕಾರಿ ಬೀಳು ಜಮೀನನ್ನು ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಒಟ್ಟು
5.04 ಎಕರೆ ಸರ್ಕಾರಿ ಜಮೀನನ್ನ ಉಮೇಶ್ ಅವರು
ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಕಾನೂನಿನ ನಿಯಮಗಳನ್ನು ಗಾಳಿ ತೂರಿ ತಹಶೀಲ್ದಾರ್ ಉಮೇಶ್ ಅವರು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪವಿದೆ. ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್ ಉಮೇಶ್, ಶಿರಸ್ತೆದಾರ್ ನಂಜುಂಡಯ್ಯ, ಆರ್. ಐ. ಬಸವರಾಜಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.
ಕಡೂರು ಪೊಲೀಸ್ ಠಾಣೆಗೆ ಎಸಿ ಕಾಂತರಾಜ್ ದೂರು ನೀಡಿದ್ದಾರೆ. ಸದ್ಯ ತಹಶೀಲ್ದಾರ್ ಉಮೇಶ್
ಕಡೂರಿನಿಂದ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು