9:59 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು

13/08/2023, 10:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್
ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಹಶೀಲ್ದಾರರ್ ಉಮೇಶ್ ವಿರುದ್ದ ಕಡೂರು ಪೊಲೀಸರಿಗೆ
ದೂರು ನೀಡಿದ್ದಾರೆ.
ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟಿದ್ದ ಆರೋಪ
ತಹಶೀಲ್ದಾರ್ ಉಮೇಶ್ ಮೇಲಿದೆ. ಕಡೂರು ತಾಲೂಕಿನ ಉಳಿಗನಾರು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಡಲಾಗಿದೆ. ಗ್ರಾಮದ ಹನುಮಯ್ಯ, ರತ್ನಮ್ಮ, ನಾರಾಯಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪ ತಹಶೀಲ್ದಾರ್ ಅವರ ಮೇಲಿದೆ. ಸರ್ಕಾರಿ ಬೀಳು ಜಮೀನನ್ನು ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಒಟ್ಟು
5.04 ಎಕರೆ ಸರ್ಕಾರಿ ಜಮೀನನ್ನ ಉಮೇಶ್ ಅವರು
ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಕಾನೂನಿನ ನಿಯಮಗಳನ್ನು ಗಾಳಿ ತೂರಿ ತಹಶೀಲ್ದಾರ್ ಉಮೇಶ್ ಅವರು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪವಿದೆ. ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್ ಉಮೇಶ್, ಶಿರಸ್ತೆದಾರ್ ನಂಜುಂಡಯ್ಯ, ಆರ್. ಐ. ಬಸವರಾಜಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.
ಕಡೂರು ಪೊಲೀಸ್ ಠಾಣೆಗೆ ಎಸಿ ಕಾಂತರಾಜ್ ದೂರು ನೀಡಿದ್ದಾರೆ. ಸದ್ಯ ತಹಶೀಲ್ದಾರ್ ಉಮೇಶ್
ಕಡೂರಿನಿಂದ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು