2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು