1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು