3:17 PM Wednesday23 - July 2025
ಬ್ರೇಕಿಂಗ್ ನ್ಯೂಸ್
Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

ಪ್ರೇಮಿ ಜತೆ ಸೇರಲು ತಾಳಿ ಕಟ್ಟಿದ ಪತಿಗೇ ಮುಹೂರ್ತ ಇಟ್ಟ ಪತ್ನಿ: ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೆರೆಗೆ ಎಸೆದು ಕೊಲೆ

14/08/2023, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೇಮಿ ಜೊತೆ ಸೇರಲು ತಾಳಿ ಕಟ್ಟಿ ಸಪ್ತಪದಿ ತುಳಿದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಅಮಾನವೀಯ ಘಟನೆಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಾಕ್ಷಿಯಾಗಿದೆ.
ನವೀನ್ (28) ಎಂಬಾತ ಪತ್ನಿಯ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ನತದೃಷ್ಟ ಪತಿ. ಪಾವನ ಅಂತ ಹೆಸರಿಟ್ಕೊಂಡ ಗೃಹಿಣಿ ಈ ಪಾಪದ ಕೆಲಸ ಮಾಡಿದ್ದಾಳೆ. ಈಕೆ ಪ್ರಿಯಕರ ಸಂಜಯ್ ಎಂಬಾತನ ಜತೆ ಸೇರಿಕೊಂಡು ಪತಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಜ್ಞಾನ ತಪ್ಪಿಸಿದ್ದಳು. ನಂತರ ಪ್ರಜ್ಞೆ ತಪ್ಪಿದ ಪತಿಯನ್ನು ಪ್ರೇಮಿ ಜೊತೆ ಬೈಕಲ್ಲಿ ತಂದು ಕೆರೆಗೆ ಎಸೆದು ಹೋಗಿದ್ದಳು. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ದೂರು ನೀಡಿದ್ದಾರೆ.


ಪ್ರೇಮಿ ಸಂಜಯ್ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿ ನವೀನ್ ಅವರನ್ನು ಪ್ರೇಮಿ ಸಂಜಯ್ ಜೊತೆ ಸೇರಿ ಪತಿ ನವೀನ್ ಗೆ ಮಂಗಳ ಹಾಡಿದ್ದಳು. ತನಿಖೆಯ ವೇಳೆ ಎಲ್ಲಾ ಸತ್ಯವನ್ನು ಪಾವನ-ಸಂಜಯ್ ಬಾಯಿ ಬಿಟ್ಟಿದ್ದಾರೆ. ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು