1:26 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ದ.ಕ.ಸಹಿತ 5 ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ

15/08/2023, 11:51

ಮಂಗಳೂರು(reporterkarnataka.com): ರಾಷ್ಟ್ರೀಯ ವಿಪತ್ತು ಉಪ ಶಮನಗಳ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜ ಹಾರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದರು.
ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್ ಅನ್ನು ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವನ್ನಾಗಿಸುವುದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿಯ ಬೀಚ್ ಟೂರಿಸಂ ಅಭಿವೃದ್ಧಿಗೆ ಕಾರ್ಯಪಡೆ ರಚನೆಯಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಈ ವರ್ಷ ಪೂರ್ಣಗೊಂಡು ಎಲ್ಲಾ ಸೇವೆಗಳನ್ನು ಒಂದೇ ಸೂರಿನಲ್ಲಿ ಒದಗಿಸಲಾಗುವುದು ಎಂದರು.
ನಮ್ಮ ಜಿಲ್ಲೆಯ ಪ್ರಮುಖ ಕಸುಬು ಮೀನುಗಾರಿಕೆಯಾಗಿದ್ದು, ಒಟ್ಟು 42 ಕಿ.ಮೀ. ಸಮುದ್ರ ತೀರವಿರುವ ಜಿಲ್ಲೆಯಲ್ಲಿ 66 ಸಾವಿರಕ್ಕೂ ಹೆಚ್ಚಿನ ಮೀನುಗಾರರಿದ್ದಾರೆ. ಅವರ ಅನುಕೂಲಕ್ಕೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಕರಾವಳಿ ಗ್ಯಾರಂಟಿಗಳಲ್ಲಿ ಈ ಬಾರಿಯ ಆಯವ್ಯಯದಲ್ಲಿ ಹಲವು ಪ್ರೋತ್ಸಾಹಕರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕ್‍ಗಳಲ್ಲಿ 3 ಲಕ್ಷ ರೂ.ಗಳ ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಸೀಮೆಎಣ್ಣೆಯನ್ನು 1.50 ಲಕ್ಷ ಕಿಲೋ ಲೀಟರ್‍ನಿಂದ 2 ಲಕ್ಷ ಕಿಲೋ ಲೀಟರ್ ವರೆಗೆ ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯಿಂದ ಮೀನುಗಾರರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಇದಕ್ಕಾಗಿ 250 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಪ್ರಸ್ತುತ ಸೀಮೆಎಣ್ಣೆ ಎಂಜಿನ್‍ಗಳಿರುವ ಮೀನುಗಾರಿಕಾ ಬೋಟ್‍ಗಳನ್ನು ಪೆಟ್ರೋಲ್ ಅಥವಾ ಡೀಸೆಲ್ ಎಂಜಿನ್‍ಗಳಾಗಿ ಬದಲಾಯಿಸಿಕೊಂಡರೆ ತಲಾ 50 ಸಾವಿರ ರೂಪಾಯಿಗಳ ವರೆಗೆ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಇಂತಹ ನಾಲ್ಕು ಸಾವಿರ ಮೀನುಗಾರಿಕಾ ದೋಣಿಗಳಲ್ಲಿನ ಎಂಜಿನ್‍ಗಳನ್ನು ಬದಲಾಯಿಸಲು 20 ಕೋಟಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ನುಡಿದರು.
ಮೀನುಗಾರಿಕೆ ಇಲಾಖೆ: ಮೀನು ಉತ್ಪಾದನೆಯನ್ನು ಹೆಚ್ಚಿಸುವುದು, ಮೀನು ಹಿಡುವಳಿ, ಇಳಿದಾಣ, ಸಂಸ್ಕರಣೆ, ಜೋಪಾಸನೆ ಮತ್ತು ಮಾರಾಟಕ್ಕೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಪಡಿಸುವುದು, ಮೀನುಗಾರರ ಆರ್ಥಿಕ-ಸಾಮಾಜಿಕವಾಗಿ ಅಭಿವೃದ್ದಿ ಪಡಿಸುವುದು ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಮಾಹಿತಿ ನೀಡುವ ಮುಖ್ಯ ಧ್ಯೇಯೋದ್ದೇಶದಿಂದ 1967 ರಲ್ಲಿ ಮೀನುಗಾರಿಕೆ ಇಲಾಖೆ ಅಸ್ತಿತ್ವಕ್ಕೆ ಬಂದಿತು. ಜಿಲ್ಲೆಯಲ್ಲಿ 23 ಮೀನುಗಾರರ ಸಹಕಾರಿ ಸಂಘಗಳು ಹಾಗೂ ಮೀನುಗಾರಿಕಾ ಫೆಡರೇಶನ್ ಇದೆ. ಅವುಗಳಲ್ಲಿ ಒಟ್ಟು 35,970 ಸದಸ್ಯರಿದ್ದಾರೆ. ಈ ಪೈಕಿ 4 ಮೀನುಗಾರ ಮಹಿಳೆಯರ ಸಹಕಾರಿ ಸಂಘಗಳೂ ಇವೆ. ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 102 ಪರ್ಸೀನ್ ದೋಣಿಗಳು 1,354 ಟ್ರಾಲ್‍ದೋಣಿಗಳು, 1,674 ಯಾಂತ್ರೀಕೃತ ನಾಡದೋಣಿಗಳು ಹಾಗೂ 318 ನಾಡದೋಣಿಗಳು ಮೀನುಗಾರಿಕೆಯಲ್ಲಿ ಕಾರ್ಯ ನಿರತವಾಗಿದ್ದು, 2022-23ನೇ ಸಾಲಿನಲ್ಲಿ ರೂ. 4,154 ಕೋಟಿ ಮೌಲ್ಯದ 3.33 ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದನೆಯಾಗಿದೆ ಎಂದು ಸಚಿವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು