5:46 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೀನುಗಾರಿಕೆಗೆ ತೆರಳಿದ್ದ ತೆಪ್ಪ ಮಗುಚಿ ಓರ್ವ ದಾರುಣ ಸಾವು: ಇನ್ನಿಬ್ಬರು ಈಜಿ ಪಾರು

15/08/2023, 16:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ.


ಮೃತನನ್ನ 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ,ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ, ಭಾರೀ ಗಾಳಿ, ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಕೃಷ್ಣನನ್ನ ಬದುಕಿಸಲು ಸಾಧ್ಯವಾಗಿಲ್ಲ. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನ ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಮೃತ ಕೃಷ್ಣ ಮೂಲತಃ ತರೀಕೆರೆ ತಾಲೂಕಿನವನು. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು