7:31 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮೀನುಗಾರಿಕೆಗೆ ತೆರಳಿದ್ದ ತೆಪ್ಪ ಮಗುಚಿ ಓರ್ವ ದಾರುಣ ಸಾವು: ಇನ್ನಿಬ್ಬರು ಈಜಿ ಪಾರು

15/08/2023, 16:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ.


ಮೃತನನ್ನ 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ,ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ. ಆದರೆ, ಕೃಷ್ಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಕೃಷ್ಣನನ್ನ ಬದುಕಿಸಲು ರಾಜೇಶ್ ಹಾಗೂ ಅಜಯ್ ಹೋರಾಡಿದ್ದಾರೆ. ಆದರೆ, ಭಾರೀ ಗಾಳಿ, ಗಾಳಿಗೆ ನೀರಿನ ಅಲೆಗಳು ರಭಸವಾಗಿದ್ದ ಕಾರಣ ಕೃಷ್ಣನನ್ನ ಬದುಕಿಸಲು ಸಾಧ್ಯವಾಗಿಲ್ಲ. ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಕೃಷ್ಣ ಅವರ ಮೃತದೇಹವನ್ನ ಉಡುಪಿಯ ಮಲ್ಪೆ ಮೂಲದ ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಹುಡುಕಿ ಹೊರ ತಂದಿದ್ದಾರೆ. ಮೃತ ಕೃಷ್ಣ ಮೂಲತಃ ತರೀಕೆರೆ ತಾಲೂಕಿನವನು. ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು