5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾಭಿನಂದನೆ

15/08/2023, 18:51

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಅಭಿನಂದಿಸಿ ಗೌರವಿಸಿದರು.


ಮಂಗಳೂರಿನಲ್ಲಿ ಕಿತ್ತಳೆ ಮಾರಿ ಬದುಕು ಕಟ್ಟಿಕೊಂಡಿದ್ದ ಹಾಜಬ್ಬ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟುವ ಕನಸು ಕಂಡಿದ್ದರು. ಅಕ್ಷರಾಭ್ಯಾಸವಿಲ್ಲದ ಹಾಜಬ್ಬ ಅವರು ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು ಎನ್ನುವ ಒಂದೇ ಕಾರಣಕ್ಕೆ ಛಲ ಬಿಡದೆ ಅಂದಿನ ಶಾಸಕರ ಬೆನ್ನು ಹಿಡಿದು ತನ್ನ ಊರಿಗೆ ಶಾಲೆ ಮಂಜೂರು ಮಾಡಿಸಿದ್ದರು. ಇದೀಗ ಆ ಶಾಲೆ ಬಹು ಎತ್ತರಕ್ಕೆ ಬೆಳೆದು ಕಾಲೇಜು ಆಗಿ ಮಾರ್ಪಟ್ಟಿದೆ. ಹಾಜಬ್ಬ ಅವರಿಗೆ ದೇಶದ ಪ್ರತಿಷ್ಢಿತ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿ ಕೂಡ ಒಲಿದು ಬಂದಿದೆ. ಹಾಜಬ್ಬ ಅವರ ಸಾಧನೆಯನ್ನು ಮನಗಂಡ ರಾಜ್ಯದ ನೂತನ ಸರಕಾರದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು ಆದರದಿಂದ ಗೌರವಿಸಿ ಸನ್ಮಾನಿಸಿದರು. ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು