1:34 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವಾಭಿನಂದನೆ

15/08/2023, 18:51

ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಅಭಿನಂದಿಸಿ ಗೌರವಿಸಿದರು.


ಮಂಗಳೂರಿನಲ್ಲಿ ಕಿತ್ತಳೆ ಮಾರಿ ಬದುಕು ಕಟ್ಟಿಕೊಂಡಿದ್ದ ಹಾಜಬ್ಬ ಅವರು ತನ್ನ ಹುಟ್ಟೂರಿನಲ್ಲಿ ಶಾಲೆ ಕಟ್ಟುವ ಕನಸು ಕಂಡಿದ್ದರು. ಅಕ್ಷರಾಭ್ಯಾಸವಿಲ್ಲದ ಹಾಜಬ್ಬ ಅವರು ತನ್ನೂರಿನ ಮಕ್ಕಳು ಅಕ್ಷರದಿಂದ ವಂಚಿತರಾಗಬಾರದು ಎನ್ನುವ ಒಂದೇ ಕಾರಣಕ್ಕೆ ಛಲ ಬಿಡದೆ ಅಂದಿನ ಶಾಸಕರ ಬೆನ್ನು ಹಿಡಿದು ತನ್ನ ಊರಿಗೆ ಶಾಲೆ ಮಂಜೂರು ಮಾಡಿಸಿದ್ದರು. ಇದೀಗ ಆ ಶಾಲೆ ಬಹು ಎತ್ತರಕ್ಕೆ ಬೆಳೆದು ಕಾಲೇಜು ಆಗಿ ಮಾರ್ಪಟ್ಟಿದೆ. ಹಾಜಬ್ಬ ಅವರಿಗೆ ದೇಶದ ಪ್ರತಿಷ್ಢಿತ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿ ಕೂಡ ಒಲಿದು ಬಂದಿದೆ. ಹಾಜಬ್ಬ ಅವರ ಸಾಧನೆಯನ್ನು ಮನಗಂಡ ರಾಜ್ಯದ ನೂತನ ಸರಕಾರದ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಸರ್ಕಿಟ್ ಹೌಸ್ ನಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು ಆದರದಿಂದ ಗೌರವಿಸಿ ಸನ್ಮಾನಿಸಿದರು. ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ವಕ್ತಾರ ಎ.ಸಿ. ವಿನಯರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು