10:52 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೆಂಗಳೂರು: ಶ್ರೀನಿವಾಸ ಪ್ರಭುಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ

15/08/2023, 21:49

ಬೆಂಗಳೂರು(reporterlarnataka.com): ಯಕ್ಷಗಾನದಿಂದ ಕನ್ನಡ ಭಾಷೆಯು ಇನ್ನಷ್ಟು ಜೀವಂತವಾಗಿರುತ್ತದೆ, ದೈಹಿಕ ಮಾನಸಿಕ ಸ್ವಾಸ್ಥ್ಯ ಕಾಪಾಡುವುದರಲ್ಲಿ ಯಕ್ಷಗಾನ ಅತ್ಯಂತ ಪ್ರಯೋಜನಕಾರಿ ಎಂದು ಎಂದು ಶಾಸಕ ರವಿ ಸುಬ್ರಹ್ಮಣ್ಯ ಹೇಳಿದರು.
ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ಭಾನುವಾರ ಸೃಷ್ಟಿ ಕಲಾ ವಿದ್ಯಾಲಯದ 23ನೇ ಸೃಷ್ಟಿ ಸಂಭ್ರಮ ಅಂಗವಾಗಿ ಪ್ರಸಿದ್ಧ ಚೆಂಡೆವಾದಕ ಶ್ರೀನಿವಾಸ ಪ್ರಭು( ಗುಂಡ) ಅವರಿಗೆ ಸೃಷ್ಟಿ ಯಕ್ಷ ಏಕಲವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸೃಷ್ಟಿ ಕಲಾವಿದ್ಯಾಲಯವು ನಿರಂತರ ಯಕ್ಷಗಾನ ತರಬೇತಿ, ಕಲಾಸೇವೆ ಮೂಲಕ ಬಸವನ ಗುಡಿ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ಶ್ರೀನಿವಾಸ ಪ್ರಭು, ಸೃಷ್ಟಿಯ ಈ ಪ್ರಶಸ್ತಿ ನನ್ನ ಕಲಾ ಬದುಕಿನಲ್ಲಿ ಅತ್ಯಂತ ಮಹತ್ವದ್ದು ಹಾಗೂ ಮರೆಯಲಾರದ್ದು ಎಂದರು.


ಸೃಷ್ಟಿ ಅಧ್ಯಕ್ಷ ಛಾಯಾಪತಿ ಕಂಚಿಬೈಲ್, ಗೌರವಾಧ್ಯಕ್ಷ ಶ್ರೀಕಾಂತ್ ಎಂ.ಜಿ., ಕಲಾವಿದರುಗಳಾದ ಸುಬ್ರಾಯ ಹೆಬ್ಬಾರ್, ಅಕ್ಷಯ ಆಚಾರ್ಯ ನಿತ್ಯಾನಂದ ನಾಯಕ್ , ಅರ್ಜುನ್ ಕೊರ್ಡೇಲ್, ಭರತ್ ರಾಜ್ ಪರ್ಕಳ ಇದ್ದರು.
ಈ ಸಂದರ್ಭ ಸುಬ್ರಾಯ ಹೆಬ್ಬಾರ್‌ ಮತ್ತು ಭರತ್‌ ರಾಜ್‌ ಪರ್ಕಳ ನಿರ್ದೇಶನದಲ್ಲಿ, ನಿತ್ಯಾನಂದ ನಾಯಕ್‌ ಪರಿಕಲ್ಪನೆಯಲ್ಲಿ ಸೃಷ್ಟಿ ಕಲಾ ವಿದ್ಯಾಲಯ ವಿದ್ಯಾರ್ಥಿಗಳಿಂದ ಕುಮಾರ ವಿಜಯ ಯಕ್ಷಗಾನ ಪ್ರದರ್ಶನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು