1:20 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ?

15/08/2023, 21:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದೇವೆ.
10 ದಿನದಲ್ಲಿ ಸರ್ವೀಸ್ ಮಾಡೋದನ್ನ ನಿಲ್ಲಿಸುತ್ತಾರೆ ಎಂದರು.
ನಮ್ಮ ಕಲ್ಲಿದ್ದಲು ಕ್ವಾಲಿಟಿ ಅಷ್ಟು ಸಾಕಾಗಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಜೊತೆ ಮಿಕ್ಸ್ ಮಾಡಬೇಕು. ಮಹಾರಾಷ್ಟ್ರದ ಮಳೆಯಿಂದ ರೈಲಿನಲ್ಲಿ ಸಾಗಿಸುತ್ತಿದ್ದ ಕಲ್ಲಿದ್ದಲು ಒದ್ದೆಯಾಗಿದೆ. ವಿ ಆರ್ ಲಕ್ಕಿ, ಕರ್ನಾಟಕದಲ್ಲಿ ಸೋಲಾರ್ ಹೆಚ್ಚು ಬಳಸುತ್ತಾರೆ ಎಂದು ಸಚಿವರು ನುಡಿದರು.
4 ದಿನ ಸೌಥ್ ಇಂಡಿಯಾದಲ್ಲಿ ಗಾಳಿ ಬರಲಿಲ್ಲ. ಆಗಲೂ ಉತ್ಪಾದನೆ ಕಡಿಮೆ ಆಯಿತು. ನಿನ್ನೆ-ಮೊನ್ನೆಯಿಂದ ಪಿಕ್ ಅಪ್ ಆಗುತ್ತಿದೆ. ಸೋಲಾರ್ ಸಬ್ ಸ್ಟೇಷನ್ ನಲ್ಲಿ ಸೋಲಾರ್ ಉತ್ಪಾದನೆ ಮಾಡುತ್ತೇವೆ. 10-20-30 ಎಕರೆ ಮಾಡಿ ರಾಜ್ಯಾದ್ಯಂತ ಸೋಲಾರ್ ಉತ್ಪಾದನೆಯನ್ನ ಸಬ್ ಸ್ಟೇಷನ್‌ಗೆ ಕೊಡುತ್ತವೆ ಎಂದು ಇಂಧನ ಸಚಿವ ಜಾರ್ಜ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು