12:16 AM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ಲೋಡ್ ಶೆಡ್ಡಿಂಗ್: ಚಿಕ್ಕಮಗಳೂರಿನಲ್ಲಿ ಇಂಧನ ಸಚಿವ ಜಾರ್ಜ್ ಏನು ಹೇಳಿದರು ಗೊತ್ತೇ?

15/08/2023, 21:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ ಆರಂಭದಲ್ಲಿ ಮಳೆ ಸ್ವಲ್ಪ ಕಡಿಮೆ ಆಯಿತು. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಗಳ ಸರ್ವೀಸ್ ಮಾಡುವುದರಿಂದ ಥರ್ಮಲ್ ಪ್ಲಾಂಟ್ ಪವರ್ ಜನರೇಟ್ ಮಾಡೋದು ಕಡಿಮೆ ಆಯಿತು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಈಗ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದೇವೆ.
10 ದಿನದಲ್ಲಿ ಸರ್ವೀಸ್ ಮಾಡೋದನ್ನ ನಿಲ್ಲಿಸುತ್ತಾರೆ ಎಂದರು.
ನಮ್ಮ ಕಲ್ಲಿದ್ದಲು ಕ್ವಾಲಿಟಿ ಅಷ್ಟು ಸಾಕಾಗಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಜೊತೆ ಮಿಕ್ಸ್ ಮಾಡಬೇಕು. ಮಹಾರಾಷ್ಟ್ರದ ಮಳೆಯಿಂದ ರೈಲಿನಲ್ಲಿ ಸಾಗಿಸುತ್ತಿದ್ದ ಕಲ್ಲಿದ್ದಲು ಒದ್ದೆಯಾಗಿದೆ. ವಿ ಆರ್ ಲಕ್ಕಿ, ಕರ್ನಾಟಕದಲ್ಲಿ ಸೋಲಾರ್ ಹೆಚ್ಚು ಬಳಸುತ್ತಾರೆ ಎಂದು ಸಚಿವರು ನುಡಿದರು.
4 ದಿನ ಸೌಥ್ ಇಂಡಿಯಾದಲ್ಲಿ ಗಾಳಿ ಬರಲಿಲ್ಲ. ಆಗಲೂ ಉತ್ಪಾದನೆ ಕಡಿಮೆ ಆಯಿತು. ನಿನ್ನೆ-ಮೊನ್ನೆಯಿಂದ ಪಿಕ್ ಅಪ್ ಆಗುತ್ತಿದೆ. ಸೋಲಾರ್ ಸಬ್ ಸ್ಟೇಷನ್ ನಲ್ಲಿ ಸೋಲಾರ್ ಉತ್ಪಾದನೆ ಮಾಡುತ್ತೇವೆ. 10-20-30 ಎಕರೆ ಮಾಡಿ ರಾಜ್ಯಾದ್ಯಂತ ಸೋಲಾರ್ ಉತ್ಪಾದನೆಯನ್ನ ಸಬ್ ಸ್ಟೇಷನ್‌ಗೆ ಕೊಡುತ್ತವೆ ಎಂದು ಇಂಧನ ಸಚಿವ ಜಾರ್ಜ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು