7:31 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು