4:46 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು

24/07/2021, 11:49

ಬಂಡಿಪೋರಾ(ReporterKarnataka.com)

ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು