6:12 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅಭಿಮತ

16/08/2023, 22:16

ಮಂಗಳೂರು(reporterkarnataka.com): ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪತ್ರಿಕಾ ಭವನದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 100 ಮಕ್ಕಳಿಗೆ ಎಂಸಿಎಫ್‌ನ ಸಿಎಸ್‌ಆರ್ ನಿಧಿ ಮತ್ತು ಇನ್ನರ್‌ವೀಲ್ ಕ್ಲಬ್ ವತಿಯಿಂದ ಬಿಜೈ ಕಾಪಿಕಾಡ್ ಅಂಗನವಾಡಿಯ ಮಕ್ಕಳಿಗೆ ಬುಧವಾರ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು, ಕಾರ್ಯನಿರತ ಪತ್ರಕರ್ತರ ಸಂಘವು ವಿಭಿನ್ನ ಪಂಕ್ತಿ ಹಾಕಿಕೊಟ್ಟಿದ್ದು, ಇದು ರಾಜ್ಯಕ್ಕೆ ಮಾದರಿ ಆಗಿದೆ ಎಂದು ಶ್ಲಾಘಿಸಿದರು.

ಪತ್ರಕರ್ತರದು ಬರೀ ಟೀಕೆ ಮಾಡುವ ಬದಲು ಇಂತಹ ಸಕಾರಾತ್ಮಕ ಚಿಂತನೆಗಳ ಮೂಲಕ ಸಮಾಜ ಕಟ್ಟುವ ಕೆಲಸ ಶ್ಲಾಘನೀಯ. ಗ್ರಾಮ ವಾಸ್ತವ್ಯ ಮಾಡಿ, ಅಲ್ಲಿನ ಶಾಲೆಯ ಸಮಸ್ಯೆಗೆ ಪತ್ರಕರ್ತರ ಸಂಘವು ಸ್ಪಂದನೆ ಮಾಡುತ್ತಿರುವ ಕಾರ್ಯ ನಿಜಕ್ಕೂ ಉತ್ತಮ ಕೆಲಸ. ಕಾರ್ಯನಿರತ ಪತ್ರಕರ್ತರ ಸಂಘದ ಚಟುವಟಿಕೆಗಳಿಗೆ ಸರಕಾರದಿಂದ ನೆರವು ಒದಗಿಸಲು ಸದಾ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸರಕಾರ, ಶಾಸಕರು, ಜಿಲ್ಲಾಡಳಿತ ಮಾಡಬೇಕಾದ ಕೆಲಸವನ್ನು ಪತ್ರಕರ್ತರ ಸಂಘ ಮಾಡುತ್ತಿದೆ ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಪ್ರಶ್ನೆ ಕೇಳುವುದು ಮಾತ್ರವಲ್ಲ, ಕೆಲಸ ಮಾಡಿಯೂ ತೋರಿಸುತ್ತಾರೆ ಎಂಬುದಕ್ಕೆ ಇಂತಹ ಕೆಲಸಗಳೆ ಸಾಕ್ಷಿ. ಕುತ್ಲೂರು ಶಾಲೆ ಅಭಿವೃದ್ಧಿ ಪಡಿಸುವ ಮೂಲಕ ಇದನ್ನು ಸಾಬೀತು ಮಾಡಿದ್ದಾರೆ ಎಂದರು.
ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ
ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿದರು.
ಭಾರತೀಯ ಸೇನೆಗೆ ಆಯ್ಕೆಯಾದ ಕುತ್ಲೂರು ಶಾಲೆಯ ಹಳೆ ವಿದ್ಯಾರ್ಥಿ ವಿಜೇತ್ ಮಡಿವಾಳ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಎಂಸಿಎಫ್ ಎಚ್‌ಆರ್ ವಿಭಾಗ ಮುಖ್ಯಸ್ಥ ಚೇತನ್ ಮೆಂಡೋನ್ಸಾ, ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ಥ್ ಅಧ್ಯಕ್ಷೆ ಗೀತಾ ಬಿ. ರೈ ಪಾಲ್ಗೊಂಡಿದ್ದರು.


ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪುಷ್ಪರಾಜ್ ಬಿ. ಎನ್. ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು