7:34 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಎಲ್ಲ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದಾ? ನಾವು ಅವರ ಕುರಿತು ಮಾತನಾಡಬಾರ್ದಾ?: ಕೆಪಿಸಿಸಿ ವಕ್ತಾರ ಲಕ್ಷ್ಮಣ್

17/08/2023, 19:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಬಿಜೆಪಿ ನಾಯಕ ಸಿ.ಟಿ.ರವಿ ಮಾತ್ರ ಎಲ್ಲಾ ನಾಯಕರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬಹುದು. ಆದರೆ ಅವರ ಬಗ್ಗೆ ನಿಜ ಹೇಳಿದ್ರೆ ಕೆಳಗಿಂದ ಮೇಲಕ್ಕೆ ಉರ್ದೋಗುತ್ತೆ ಎಂದು
ರವಿ ವಿರುದ್ಧ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
2020ರಲ್ಲಿ ಸಿ.ಟಿ.ರವಿ ಎಲ್ಲೆಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿದ್ದಾರೆಂದು ಪ್ರಶ್ನಿಸಿದ್ದೆ.
ಸತ್ಯಹರಿಶ್ಚಂದ್ರನಂತೆ ಮಾತನಾಡ್ತೀರಾ, ನಿಮ್ಮ ಹಿನ್ನೆಲೆ ಏನೆಂದು ಪ್ರಶ್ನಿಸಿದ್ದೆ. ನೀವು ಬ್ಯುಸಿನಿಸ್ ಮ್ಯಾನ್, ಎಜುಕೇಶನಲಿಸ್ಟ್, ಇಂಡಸ್ಟ್ರಿಯಲಿಸ್ಟ್, ರಿಯಲ್ ಎಸ್ಟೇಟ್ ಏನೆಂದು ಜನರಿಗೆ ತಿಳಿಸಿ ಎಂದಿದ್ದೆ ಎಂದು ಲಕ್ಷ್ಮಣ್ ನುಡಿದರು.
ಜನ ಹೇಳ್ತಿದ್ದಾರೆ, ನೀವು ಲೂಟಿ ರವಿ ಎಂದು ಪ್ರಶ್ನೆ ಮಾಡಿದ್ದೆ.
ಸಿ.ಟಿ. ರವಿ ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹಾಕಿದ್ರು, ಇಂದು ಬೇಲ್ ಆಗಿದೆ. ಇತರೆ ಬಿಜೆಪಿ ಮುಖಂಡರು ಕೂಡ ಬೆಂಗಳೂರು, ಮೈಸೂರಿನಲ್ಲಿ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ, ಪ್ರಧಾನಿ ಮೋದಿ, ಸಿ.ಟಿ.ರವಿ ವಿರುದ್ಧ ಮಾತನಾಡಿದ್ರೆ ಕೇಸ್ ಹಾಕಿ, ಇಡಿ, ಸಿಬಿಐ, ಪೊಲೀಸ್ ಮೂಲಕ ಹೆದರಿಸಲು ಪ್ರಯತ್ನಿಸುತ್ತಾರೆ.
ಬಿಜೆಪಿಯವರ ಈ ಬೆದರಿಕೆಗೆ ನಾವು ಬೆದರುವ ವಂಶಸ್ಥರಲ್ಲ, ಕಾಂಗ್ರೆಸ್ ವಂಶಸ್ಥರು.
ನನ್ನ ಆರೋಪದ ಬಗ್ಗೆ ತನಿಖೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡ್ತೇನೆ. ನ್ಯಾಯಧೀಶರ ಮೂಲಕ ನನ್ನ ಆರೋಪದ ತನಿಖೆ ಆಗಬೇಕೆಂದು ಒತ್ತಾಯಿಸುತ್ತೇನೆ. ನನ್ನ ಆರೋಪದ ಬಗ್ಗೆ ಸಿಐಡಿ ಮೂಲಕ ಸಮಗ್ರ ತನಿಖೆಯಾಗಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು