5:46 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪಿಡಬ್ಲ್ಯುಡಿಗೆ ಹಿಡಿಶಾಪ ಹಾಕುತ್ತಿದ್ದವರು ಪೊಲೀಸರಿಗೆ ಜೈ ಎಂದರು!: ರಸ್ತೆ ಗುಂಡಿ ಮುಚ್ಚಿದ ಖಾಕಿ ಪಡೆ!!

18/08/2023, 10:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ. ಹೊಂಡ ಬಿದ್ದ ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಪ್ರಯಾಣಿಕರು ಹೈರಾಣಾಗಿದ್ದರು. ಇದನ್ನು ಮನಗಂಡ ಪೊಲೀಸ್ ಇಲಾಖೆ ಸ್ವಂತ ಖರ್ಚಿನಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಿದೆ.


ಇದೆಲ್ಲ ನಡೆದದ್ದು ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ಭಾರೀ ಗುಂಡಿಗಳ ಗೋಳು ತಡೆಯಲಾಗದೆ ಸ್ವಂತ ಖರ್ಚಿನಲ್ಲಿ ಸಿಪಿಐ, ಪಿಎಸ್ಐ ರಸ್ತೆಗೆ ಮಣ್ಣು ಹಾಕಿಸಿ ಗುಂಡಿ ಮುಚ್ಚಿದ್ದಾರೆ. ಎರಡು ಟ್ರಾಕ್ಟರ್ ಮಣ್ಣು ತರಿಸಿ ಗುಂಡಿ ಮುಚ್ಚಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಹಿಡಿಶಾಪ ಹಾಕಿಕೊಂಡೇ ಓಡಾಡುತ್ತಿದ್ದ ವಾಹನ ಚಾಲಕರು ಪೊಲೀಸರಿಗೆ ಸೆಲ್ಯೂಟ್ ಹೊಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು