1:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ: ಸೆಪ್ಟೆಂಬರ್ 15ರಂದು ಬೆಳ್ಳಿತೆರೆಗೆ

18/08/2023, 13:37

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಗರದ ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು.
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಚಿತ್ರದ ಪೋಸ್ಟರ್ ಅನ್ನು ಹಾಗೂ ಇನ್ನೋರ್ವ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಇವರು ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.


ನಿರ್ಮಾಪಕ ಲುವಿಸ್ ಜೆ. ಪಿಂಟೊ ಪ್ರಸ್ತಾವಿಕವಾಗಿ ಮಾತನಾಡಿ, ‘’ಅದ್ದೂರಿಯಾಗಿ ನಿರ್ಮಾಣವಾದ ಚಿತ್ರದಲ್ಲಿ ಸಿನೆಮಾಕ್ಕೆ ಪೂರಕವಾದ ಎಲ್ಲಾ ಅಂಶಗಳಿದ್ದರೂ ಕೇವಲ ಸಿನೆಮಾವಾಗಿ ನಾವಿದನ್ನು ನಿರ್ಮಿಸಿಲ್ಲ. ಕೊಂಕಣಿ ಅಸ್ಮಿತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಲು ‘ಚಲನಚಿತ್ರದಿಂದ ಚಳುವಳಿವರೆಗೆ’ ಎಂಬ ಉದ್ದೇಶವಿಟ್ಟು ಕೆಲಸ ಮಾಡಿದ್ದೇವೆ’’ ಎಂದು ಮಾಹಿತಿ ನೀಡಿದರು.
ಪ್ರೇಮದ ಮೂಲಕ, ಕೊಂಕಣಿ ಅಸ್ಮಿತೆಯ ಹುಡುಕಾಟದ ಬಗ್ಗೆ ಎರಿಕ್ ಒಝೇರಿಯೊ ಬರೆದ ಮೂಲಕತೆಯನ್ನು, ಜೊಯೆಲ್ ಪಿರೇರಾ ಚಿತ್ರಕತೆಯಾಗಿ ರಚಿಸಿದ ಈ ಸಿನೆಮಾಕ್ಕೆ ವಿಲಾಸ್ ರತ್ನಾಕರ್ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸಿನೆಮಾಟೊಗ್ರಾಫಿ, ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ, ಎರಿಕ್ ಒಝೇರಿಯೊ ಸಂಗೀತ ನೀಡಿದ್ದಾರೆ. ಡೆನಿಸ್ ಮೊಂತೇರೊ, ಆಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಸಾಯಿ ಪನಂದಿಕಾರ್, ಪ್ರಿನ್ಸ್ ಜೇಕಬ್, ನೆಲ್ಲು ಪೆರ್ಮನ್ನೂರ್, ಸ್ಟ್ಯಾನಿ ಆಲ್ವಾರಿಸ್, ಗೌರೀಶ್ ವೆರ್ಣೆಕರ್, ಸುನೀಲ್ ಸಿದ್ದಿ ಮತ್ತಿತರರು ಪ್ರಮುಖ ಭೂಮಿಕೆಯಲ್ಲಿರುವ ಈ ಸಿನೆಮಾವು ಸೆಪ್ಟೆಂಬರ್ 15 ರಿಂದ ದಕ್ಷಿಣ ಕನ್ನಡ, ಉಡುಪಿಯ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ. ಮುಂದಿನ ದಿನಗಳಲ್ಲಿ ದೇಶ ಮತ್ತು ವಿದೇಶದ ಇತರೆಡೆ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು