5:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

18/08/2023, 20:11

ಬೆಂಗಳೂರು(reporterkarnataka.com): ನಗರದ ಹೊರವಲಯದ ಬನ್ನೇರುಘಟ್ಟದ ಬಳಿ
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೈಗೈದ ಪ್ರಕರಣ ಪ್ರಮುಖ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿಯ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿ ಪ್ರಕರಣದ ಆರೋಪಿ
ಸೋಮ ಅಲಿಯಾಸ್ ಸೋಮಶೇಖರ್ ಗೆ ನಾರಾಯಣ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿಗೆ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬನ್ನೇರುಘಟ್ಟ ಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ
ಇಂದು ಬೆಳಗ್ಗೆ ಅತ್ಯಾಚಾರ ಪ್ರಕರಣದ ಸ್ಥಳ ಮಹಜರಿಗೆ ಆರೋಪಿಯನ್ನು ಕರೆದೊಯ್ಯುವಾಗ ಮೂತ್ರ ವಿಸರ್ಜನೆ ನೆಪದಲ್ಲಿ ಜೀಪ್ ನಿಂದ ಕೆಳಗಿಳಿದು ಪರಾರಿಯಾಗಲು ಯತ್ನಿಸಿದ್ದ. ಆಗ ಬೆನ್ನಟ್ಟಿದ ಪೇದೆ ಮಾದಪ್ಪ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಡ್ಯಾಗರ್ ಎಸೆದು ಶರಣಾಗುವಂತೆ ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಮತ್ತೆ ಹಲ್ಲೆಗೆ ಮುಂದಾದಾಗ ಮತ್ತೊಂದು ಗುಂಡು ಹಾರಿಸಿದ್ದು ಅದು ಎಡಗಾಲಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ
ತಿಳಿಸಿದ್ದಾರೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿ ನಿವಾಸಿ 38ರ ಹರೆಯದ ಮಹಿಳೆಯ
ಮೇಲೆ ನಿರ್ಜನ ಪ್ರದೇಶದಲ್ಲಿ ಆರೋಪಿ ಸೋಮ ಸೇರಿ ಮೂವರು ಕಾಮುಕರು ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು
ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ
ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಕಂಡುಬಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು