12:46 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಾರಣಾಸಿ: 4 ದಿನಗಳ ಯುವ 20 ಶೃಂಗಸಭೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ

18/08/2023, 20:15

ವಾರಣಾಸಿ(reporterkarnataka.com): ಯುವ 20 ಶೃಂಗಸಭೆ -2023 ಅನ್ನು ವಾರಣಾಸಿಯ ರುದ್ರಾಕ್ಷ ಅಂತಾರಾಷ್ಟ್ರೀಯ ಸಹಕಾರ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಶುಕ್ರವಾರ ಉದ್ಘಾಟಿಸಿದರು.
ವಾರಣಾಸಿಯಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ವೈ20 ಶೃಂಗಸಭೆಯ ಎರಡನೇ ದಿನವಾದ ಇಂದು ಔಪಚಾರಿಕ ಉದ್ಘಾಟನೆ ನಡೆಸಲಾಯಿತು. ಯುವ 20 (Y20) ಶೃಂಗಸಭೆಯನ್ನು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಭಾರತದ G20 ಪ್ರೆಸಿಡೆನ್ಸಿಯ ಚೌಕಟ್ಟಿನ ಅಡಿಯಲ್ಲಿ ಆಯೋಜಿಸಿದೆ. Y20 ಶೃಂಗಸಭೆಯು ಗುವಾಹಟಿಯಲ್ಲಿ ಆರಂಭದ ಸಭೆ, ಲೇಹ್, ಲಡಾಖ್‌ನಲ್ಲಿ ನಡೆದ ಪೂರ್ವ ಶೃಂಗಸಭೆ ಮತ್ತು ದೇಶಾದ್ಯಂತ ನಡೆಸಿದ ವಿವಿಧ ಜನ ಭಾಗಿದರಿ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸಭೆಗಳ ಭವ್ಯ ರೂಪವಾಗಿದೆ. ನಾಲ್ಕು ದಿನಗಳ ಶೃಂಗಸಭೆಯಲ್ಲಿ G20 ದೇಶಗಳು, ಅತಿಥಿ ರಾಷ್ಟ್ರಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸುಮಾರು 125 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು