11:11 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ: ಪರಿಹಾರ ನೀಡದೆ ವಂಚನೆ; 22ರಿಂದ 20 ಗ್ರಾಮದ ಸಂತ್ರಸ್ತರಿಂದ ಧರಣಿ

18/08/2023, 21:02

ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೇ 25 ರಷ್ಟು ಕೂಡ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ರಸ್ತೆ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ. ಇದರ ವಿರುದ್ಧ ಇದೇ 22ರಿಂದ 29 ರವರಿಗೆ ಎನ್ಎಚ್ಎಐ ಯೋಜನಾ ಕಚೇರಿ ಎದುರು 20 ಗ್ರಾಮಗಳ ಸಂತ್ರಸ್ತರು ಧರಣಿ ನಡೆಸುತ್ತೇವೆ ಎಂದು ಭೂ ಮಾಲೀಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳದ ಸಾಣೂರಿನಿಂದ ಮಂಗಳೂರಿನ ನಂತೂರು ವೃತ್ತದವರೆಗೆ ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬೀಳುತ್ತಿದೆ ಎಂದರು.
ನಂತೂರಿನ ಹೆದ್ದಾರಿ ಪ್ರಾಧಿಕಾರದ ಕಚೇರಿ ಮುಂದೆ
ಕಳೆದ ಮಾರ್ಚ್ ತಿಂಗಳಲ್ಲಿ ಪ್ರತಿಭಟನೆ ನಡೆಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಆದರೆ ಈಗ 4 ತಿಂಗಳಾದರೂ ಯಾವುದೇ ಸುದ್ದಿಯೇ ಇಲ್ಲ. ಒಂದು ತಿಂಗಳಲ್ಲಿ ಪರಿಹಾರ ತೆಗೆಸಿಕೊಡುತ್ತೇನೆ ಎಂದು ಹೇಳಿದ ಅಧಿಕಾರಿ ಕೂಡ ನಾಪತ್ತೆ ಆದರು. 5 ತಿಂಗಳು ಕಳೆದರೂ ಭೂಸ್ವಾಧೀನಕ್ಕೆ ಪರಿಹಾರ ನೀಡುವ ಬಗ್ಗೆ ಪ್ರಕ್ರಿಯೆ ಆಗಿಲ್ಲ. ಹೈಕೋರ್ಟ್ ನಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆದೇಶ ನೀಡಿದರೂ ಅಧಿಕಾರಿಗಳು ಪತ್ರವ್ಯವಹಾರ ಮಾಡುವುದರಲ್ಲಿಯೇ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
2020ರ ಮಾರುಕಟ್ಟೆ ದರದ ಪ್ರಕಾರ, ಭೂಮಿಗೆ ಪರಿಹಾರ ನೀಡಲು ಆದೇಶ ನೀಡಲಾಗಿತ್ತು. ಈಗ ಮೂರು ವರ್ಷ ಕಳೆದಿದ್ದು, ಭೂಮಿಗೆ ಬೆಲೆ ಜಾಸ್ತಿ ಆಗಿದೆ. ಸೂಕ್ತ ಪರಿಹಾರಕ್ಕಾಗಿ ನಾವು ಮತ್ತೆ ಧರಣಿ ನಡೆಸುವುದು ಅನಿವಾರ್ಯ ಆಗಿದೆ. ಬೆಳಿಗ್ಗೆಯಿಂದ ಸಂಜೆಯ ವರೆಗೆ ದಿನವೂ ಧರಣಿ ನಡೆಸಲಿದ್ದೇವೆ ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು ಅವರ ಹೆಸರಿನಲ್ಲಿ ಬಿಜೆಪಿ ಮಾಹಿತಿ ವಿಭಾಗವು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಪದವು ಗ್ರಾಮದ ಎರಡೂವರೆ ಎಕರೆ ಜಾಗದ ಸ್ವಾಧೀನಕ್ಕೆ 200 ಕೋಟಿ ಬಿಡುಗಡೆ ಆಗಿದೆ ಎಂದು ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದಾರೆ. ದಾಖಲೆ ಕೇಳಿದರೆ ಅವರಿಂದ ಯಾವುದೇ ಉತ್ತರ ಇಲ್ಲ. ಸುಳ್ಳು ಹೇಳಿ ಜನರನ್ನು ಮೋಸ ಮಾಡುವುದುನ್ನು ನಿಲ್ಲಿಸಬೇಕು. ಕಳೆದ ನಾಲ್ಕು ವರ್ಷಗಳಲ್ಲಿ 12 ಮಂದಿ ವಿಶೇಷ ಭೂಸ್ವಾಧೀನ ಅಧಿಕಾರಿ ಬದಲಾಗಿದ್ದಾರೆ. ಒಬ್ಬ ಅಧಿಕಾರಿ ಬಂದು ತಿಂಗಳು ಕಳೆಯುವಾಗ ಮತ್ತೊಬ್ಬ ಬರುತ್ತಾರೆ ಎಂದು ಸಂತ್ರಸ್ತ ಹೋರಾಟಗಾರ ರತ್ನಾಕರ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ವಿಶ್ವಜಿತ್, ಪ್ರಕಾಶ್ಚಂದ್ರ, ಜಯರಾಂ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು