4:05 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ 20ರಂದು ಪಾದಯಾತ್ರೆ,‌ ಬೃಹತ್ ಪ್ರತಿಭಟನೆ

18/08/2023, 23:17

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ
ಇದೇ 20 ರಂದು ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೌಜನ್ಯ ಹೋರಾಟ ಸಮಿತಿ ಸಂಚಾಲಕಿ ಪ್ರಸನ್ನ ರವಿ ಹೇಳಿದರು.
ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ 3.30ಕ್ಕೆ ನಗರದ ಕದ್ರಿ ಮಂಜುನಾಥ ದೇವಸ್ಥಾನದಿಂದ ಕದ್ರಿ ಬಯಲು ರಂಗ ಮಂದಿರದವರಿಗೆ ಪಾದಯಾತ್ರೆ ನಡೆಯಲಿದೆ. ಸಂಜೆ 4 ಗಂಟೆಗೆ ಕದ್ರಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸೌಜನ್ಯ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅವರ ತಾಯಿ ಕುಸುಮಾವತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸೌಜನ್ಯಳ ಕೊಲೆ ನಡೆದು 11 ವರ್ಷಗಳು ಆಗಿವೆ. ಆದರೆ ಇದರ ಹಿಂದಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಸಂತೋಷ್ ರಾವ್ ಆರೋಪಿಯಲ್ಲ ಎಂದು ನ್ಯಾಯಾಲಯ ಹೇಳಿರುವುದರಿಂದ ನೈಜ ಅಪರಾಗಳಿಗೆ ಶಿಕ್ಷೆ ಸಿಗಬೇಕು. ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಮಂಗಳೂರಿನ ಜನತೆ ಕೈಜೋಡಿಸಬೇಕು. ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಹೋರಾಟ ಸಮಿತಿ ಸದಸ್ಯರಾದ ವಿಖ್ಯಾತ್ ಉಳ್ಳಾಲ್, ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು