12:43 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬಿಬಿಎಂಪಿ: ಬಿಜೆಪಿ ಸರಕಾರ ಮಾಡಿದ್ದ ಕ್ಷೇತ್ರ ಪುನರ್ವಿಂಗಡಣೆ ರದ್ದು; ವಾರ್ಡ್ ಗಳ ಸಂಖ್ಯೆ 225ಕ್ಕೆ ಇಳಿಕೆ

19/08/2023, 20:33

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಾಡಿದ ಬೃಹತ್ ಬೆಂಗಳೂರು ಮಹಾನಗರಪಾಲಿಕೆ
(ಬಿಬಿಎಂಪಿ) ಕ್ಷೇತ್ರ ಪುನರ್ವಿಂಗಡಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರ ರದ್ದುಪಡಿಸಿದ್ದು, 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ.
ಬಿಜೆಪಿ ಸರಕಾರ ಬಿಬಿಎಂಪಿಯ 198 ವಾರ್ಡ್ ಗಳನ್ನು 243ಕ್ಕೇರಿಸಿತ್ತು. ಕಾಂಗ್ರೆಸ್ ಮತ್ತು ಜನತಾ ದಳ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ ಬಿಜೆಪಿ ಇದಕ್ಕೆ ಕ್ಯಾರೇ ಅನ್ನಲಿಲ್ಲ. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಹೊರಡಿಸಿದ ಆದೇಶವನ್ನು ರದ್ದುಪಡಿಸಿದೆ. 243 ವಾರ್ಡ್ ಗಳನ್ನು ರದ್ದುಪಡಿಸಿ 225ಕ್ಕೆ ಇಳಿಸಿದೆ. ಈ ಕುರಿತು ಗಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಮಾಡಿದ ಶಿಫಾರಸ್ಸಿನಂತೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು