6:25 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರು ಅವಧಿ ಮುಗಿದ ಔಷಧದಂತೆ: ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಟೀಕೆ

19/08/2023, 20:43

ಮಂಗಳೂರು(reporterkarnataka.com):ಬಿಜೆಪಿ ರಾಜ್ಯದಲ್ಲಿ ಚೇತರಿಕೆ ಆಗದಿರುವಷ್ಟು ಅಧ:ಪತನದ ಹಾದಿ ಹಿಡಿದಿದೆ. ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷರು ಅವಧಿ ಮುಗಿದ ಔಷಧ ರೀತಿಯಲ್ಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ವ್ಯಂಗ್ಯವಾಡಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಂತರಿಕ ಗುಂಪುಗಾರಿಕೆಯಿಂದ ಬಳಲುತ್ತಿದೆ. ಇವತ್ತಿನವರಿಗೆ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುವುದಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ನಾಯಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ತಮ್ಮ ಸೋಲಿಗೆ ಬಿಜೆಪಿಯವರೇ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರೂ ಆತ್ಮಾವಲೋಕನ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡು ಈಗ ಅವಧಿ ಮೀರಿದ ಔಷಧೀಯ ರೀತಿಯಲ್ಲಿ ನಳಿನ್ ಕುಮಾರ್ ಕಟೀಲ್ ಬಿಜೆಪಿಯಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶರಣಾಗಿದ್ದಾರೆ ಎಂದು ಐವನ್ ಹೇಳಿದರು.
ಬಿಜೆಪಿ ಸರಕಾರದ ಅವಧಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಉತ್ತಮ ವ್ಯಾಪಕ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ. ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.
ವೆನ್ಲಾಕ್ ಆಸ್ಪತ್ರೆ ಸಮಸ್ಯೆ ಗಳ ಬಗ್ಗೆ ಟೀಕೆ ಮಾಡುವ ಸ್ಥಳೀಯ ಶಾಸಕರು ತಮ್ಮ ಹೊಣೆಗಾರಿಕೆ ಮರೆತು ಮಾತನಾಡುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸಗಳ ಅರ್ಧ ಭಾಗವನ್ನು ಕೂಡ ನಮ್ಮ ಸಂಸದರು ಮಾಡಿಲ್ಲ. ಮಂಗಳೂರಿಗೆ ಮೆಟ್ರೋ ತರಬಹುದಿತ್ತು. ಅದು ಕೂಡ ಸಾಧ್ಯ ಆಗಿಲ್ಲ. ಪಂಪ್ ವೆಲ್ ಸೇತುವೆ ಕೂಡ ಅಸಮರ್ಪಕವಾಗಿದೆ ಎಂದರು ಟೀಕಿಸಿದ್ದಾರೆ.
ಮಹಾನಗರ ಪಾಲಿಕೆ ಸದಸ್ಯ ಪ್ರವೀಣ್ ಚಂದ್ರ
ಆಳ್ವ, ಮಾಜಿ ಸದಸ್ಯರಾದ ಸೇಸಮ್ಮ, ಭಾಸ್ಕರ ರಾವ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಅಬ್ದುಲ್ ಸಲೀಂ ಮುಕ್ಕ, ಚೇತನ್ ಕುಮಾರ್, ಹಬೀಬ್ ಕಣ್ಣೂರ್, ಸತೀಶ್ ಪೆಂಗಲ್, ಯೋಗೀಶ್ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು