12:30 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಮಂಗಳೂರು: ಗ್ಯಾಸ್ ಸಿಲಿಂಡರ್ ಅಕ್ರಮ ದಾಸ್ತಾನು; ಒಬ್ಬನ ಬಂಧನ

19/08/2023, 22:27

ಮಂಗಳೂರು(reporterkarnataka.com): ನಗರದ ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗ್ಯಾಸ್‌ ಸಿಲಿಂಡರ್‌ ದಾಸ್ತಾನು ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಅಳಕೆ ನ್ಯೂಚಿತ್ರಾ ಮಸೀದಿ ಪಕ್ಕದಲ್ಲಿರುವ ಜನನಿಬಿಡ ವಸತಿ ಸಂಕೀರ್ಣದ ಬಳಿ ಮಂಗಳೂರು ಗ್ಯಾಸ್‌ ಲೈಟ್ ಅಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗ್ಯಾಸ್‌ ಸಿಲಿಂಡರ್‌ ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ತಿಳಿದು ಬಂದ ಮಾಹಿತಿಯಂತೆ ದಾಳಿ ಮಾಡಲಾಯಿತು.


ಈ ಸಂದರ್ಭದಲ್ಲಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್.ಪಿ ಗ್ಯಾಸ್ ಸಿಲಿಂಡರ್ ಗಳು ಸೇರಿದಂತೆ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್ ಗಳನ್ನು ಪತ್ತೆ ಹಚ್ಚಲಾಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳಕೆಯ ಶೇಖ್ ಆಶಪ್‌ ಉದ್ದೀನ್ (59) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು