1:34 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ; ಆಕೆ ಬರೇ ಹೆಣ್ಣಲ್ಲ, ಶಕ್ತಿ: ಮಹೇಶ್ ಶೆಟ್ಟಿ ತಿಮರೋಡಿ

20/08/2023, 21:44

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂದು ಇಡೀ ದಕ್ಷಿಣ ಕನ್ನಡಕ್ಕೆ ಗೊತ್ತು. ನಾವು 11 ವರ್ಷಗಳಿಂದ ನ್ಯಾಯದ ಭಿಕ್ಷೆ ಬೇಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಸೌಜನ್ಯ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಗರದ ಕದ್ರಿ ಬಯಲು ರಂಗ ಮಂದಿರದಲ್ಲಿ ಭಾನುವಾರ ನಡೆದ ಸೌಜನ್ಯ ಪರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ಎಲ್ಲ ರಾಜಕೀಯ ಪಕ್ಷದವರೂ ಒಂದೇ. ನಾವು 11 ವರ್ಷಗಳಿಂದ ನ್ಯಾಯ ಕೊಡಿ ಅಂತ ಭಿಕ್ಷೆ ಬೇಡುತ್ತಿದ್ದೇವೆ. ಕಾನೂನಾತ್ಮಕವಾಗಿ ನೀವು ನ್ಯಾಯ ಕೊಡದಿದ್ದರೆ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ಹೇಗೆ ಪಡೆಯಬೇಕು ಎನ್ನುವುದು ನಮಗೆ ಗೊತ್ತು ಎಂದು ಅವರು ನುಡಿದರು.
ಸೌಜನ್ಯ ಬರೇ ಹೆಣ್ಣಲ್ಲ. ಅದೊಂದು ಶಕ್ತಿ. ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ ಇದ್ದ ಹಾಗೆ ಕಲಿಯುಗದಲ್ಲಿ ಸೌಜನ್ಯ. ಇದು ಇಲ್ಲಿಗೆ ನಿಂತು ಹೋಗುವುದಿಲ್ಲ. ಸೌಜನ್ಯ ನೆಪ ಮಾತ್ರ. ಸೌಜನ್ಯ ಪ್ರಕರಣ ನಡೆದ ಬಳಿಕ ಒಂದೊಂದಾಗಿ ಪ್ರಕರಣಗಳು ಹೊರಬರುತ್ತಿದೆ ಎಂದು ಅವರು ನುಡಿದರು.
ಹೋರಾಟ ಸಮಿತಿಯ ಸಂಚಾಲಕಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಉಪಸ್ಥಿತರಿದ್ದರು. ಇದಕ್ಕೆ ಮುನ್ನ ಕದ್ರಿ ದೇವಾಲಯದಿಂದ ಬಯಲು ರಂಗ ಮಂದಿರದ ವರೆಗೆ ಪಾದಯಾತ್ರೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು